Webdunia - Bharat's app for daily news and videos

Install App

ದಕ್ಷಿಣ ಕೋರಿಯಾದ ಸ್ಯಾಮ್ಸಂಗ್ ಕಂಪೆನಿ ತನ್ನ ನೌಕರರಲ್ಲಿ ಕ್ಷಮೆ ಕೇಳಿದ್ಯಾಕೆ?

Webdunia
ಬುಧವಾರ, 28 ನವೆಂಬರ್ 2018 (13:57 IST)
ದಕ್ಷಿಣ ಕೋರಿಯಾ : ದಕ್ಷಿಣ ಕೋರಿಯಾದ ಮೊಬೈಲ್ ತಯಾರಿಕಾ ಕಂಪನಿ ಹಾಗೂ ಚಿಪ್ ತಯಾರಕ ಕಂಪನಿ ಸ್ಯಾಮ್ಸಂಗ್ ಕೊನೆಗೂ ಕ್ಯಾನ್ಸರ್ ಪೀಡಿತ ನೌಕರರಿಗೆ ಪರಿಹಾರ ಘೋಷಣೆ ಮಾಡಿದೆ.


ಕಳೆದ ಕೆಲವು ವರ್ಷಗಳ ಹಿಂದೆ ಸ್ಯಾಮ್ಸಂಗ್ ಡಿಸ್ಪ್ಲೇ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುವ 240 ಕಾರ್ಮಿಕರು ಒಂದೇ ಬಾರಿ ಅನಾರೋಗ್ಯಕ್ಕೊಳಗಾಗಿದ್ದರು. ಅವರನ್ನು ಪರೀಕ್ಷೆ ಮಾಡಿದ ನಂತರ  ಕಾರ್ಮಿಕರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂಬ ಸಂಗತಿ ಹೊರ ಬಿದ್ದಿತ್ತು. ಆಗ ಕಾರ್ಮಿಕರು ಹಾಗೂ ಸಿಬ್ಬಂದಿ ಕಂಪನಿ ನಿರ್ಲಕ್ಷ್ಯದಿಂದ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದು ಆರೋಪ ಮಾಡಿದ್ದರು. ಆದರೆ ಇದನ್ನು ಒಪ್ಪಿಕೊಳ್ಳಲು ಕಂಪೆನಿ ತಯಾರಿರಲಿಲ್ಲ.


ಆದರೆ ಇದೀಗ ಹೊರಬಿದ್ದ ತನಿಖಾ ವರದಿಯ ಪ್ರಕಾರ ಕಾರ್ಖಾನೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಅಪಾಯಕಾರಿ ವಿಕಿರಣಗಳು ನೌಕರರನ್ನು ಕ್ಯಾನ್ಸರ್ ಗೆ ನೂಕಿವೆ ಎಂಬುದು ಬಹಿರಂಗವಾಗಿತ್ತು. ಈಗಾಗಲೇ 80 ಮಂದಿ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಇದೀಗ ಕಂಪನಿ ಘಟನೆ ಬಗ್ಗೆ ತಪ್ಪೊಪ್ಪಿಕೊಂಡು, ಕ್ಷಮೆ ಕೇಳಿದೆ, ಅಲ್ಲದೇ ಕಾರ್ಮಿಕರಿಗೆ 94 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments