Webdunia - Bharat's app for daily news and videos

Install App

ಪಿಒಕೆಯಲ್ಲಿ ಪಾಕಿಸ್ತಾನ ವಿರುದ್ಧ ಪಾಕಿಸ್ತಾನಿಯರು ಇದ್ದಕ್ಕಿದ್ದಂತೆ ತಿರುಗಿಬೀಳಲು ಕಾರಣಗಳು

Krishnaveni K
ಬುಧವಾರ, 15 ಮೇ 2024 (14:00 IST)
ಜಮ್ಮು&ಕಾಶ್ಮೀರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನ ಪಾಕಿಸ್ತಾನ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಪಿಒಕೆಯಲ್ಲಿ ಈಗ ಜನ ದಂಗೆಯೆದ್ದಿದ್ದು ಪಾಕಿಸ್ತಾನಕ್ಕೆ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತಿದೆ. ಅಷ್ಟಕ್ಕೂ ಇಲ್ಲಿ ಜನ ಪಾಕಿಸ್ತಾನ ವಿರುದ್ಧ ತಿರುಗಿಬೀಳಲು ಕಾರಣವೇನು ನೋಡೋಣ.

ಪಾಕಿಸ್ತಾನ ಸರ್ಕಾರ ಅನುಸರಿಸುತ್ತಿರುವ ತಾರತಮ್ಯ ನೀತಿ ಕೊನೆಯಾಗಬೇಕು. ಕೆಲವೇ ವರ್ಗದವರಿಗೆ ಮೀಸಲಾಗಿರುವ ವಿಶೇಷ ಸವಲತ್ತುಗಳನ್ನು ರದ್ದು ಪಡಿಸಬೇಕು ಎಂದು ಪಿಒಕೆ ಜನ ಬೇಡಿಕೆಯಿಟ್ಟಿದ್ದಾರೆ. ಅಲ್ಲದೆ, ಇಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದ್ದು ಹಣದುಬ್ಬರ ನಿಯಂತ್ರಿಸಲು ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಜನ ತಿರುಗಿಬಿದ್ದಿದ್ದಾರೆ.

ಇಲ್ಲಿನ ಜನ ದಂಗೆಯೇಳುತ್ತಿದ್ದಂತೇ ಎಚ್ಚೆತ್ತುಕೊಂಡ ಪಾಕಿಸ್ತಾನಕ್ಕೆ ಸರ್ಕಾರ ಈ ಭಾಗಕ್ಕೆ ವಿಶೇಷ ಅನುದಾನ ಘೋಷಿಸಿದೆ. ಆದರೆ ಇದ್ಯಾವುದೂ ಇಲ್ಲಿನ ಜನರಿಗೆ ಸಮಾಧಾನ ತರುತ್ತಿಲ್ಲ. ಪಾಕಿಸ್ತಾನ ಸರ್ಕಾರದ ಯಾವುದೇ ಆಶ್ವಾಸನೆಗಳನ್ನೂ ನಂಬಲ್ಲ ಎನ್ನುತ್ತಿದ್ದಾರೆ. ಈ ಪ್ರತಿಭಟನೆಗೆ ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಸಿ) ನೇತೃತ್ವ ವಹಿಸಿದೆ.

ಇನ್ನೊಂದೆಡೆ ಪಿಒಕೆ ಮೇಲೆ ಭಾರತ ತನ್ನ ಹಕ್ಕು ಸ್ಥಾಪಿಸುತ್ತಲೇ ಬಂದಿದೆ. ಇತ್ತೀಚೆಗೆ ವಿವಿಧ ಮಸೂದೆಗಳ ಮೂಲಕ ಪಿಒಕೆ ಮೇಲೆ ಆಧಿಕೃತವಾಗಿ ಹಕ್ಕು ಚಲಾಯಿಸುತ್ತಿದೆ. ಇದು ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ. ಜೊತೆಗೆ ಈಗ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಭಾರತದ ನೆರವಿಗಾಗಿ ಎದಿರು ನೋಡುತ್ತಿದ್ದಾರೆ. ಹೀಗಾಗಿ ಎಲ್ಲಿ ಪಿಒಕೆ ತನ್ನ ಕೈ ತಪ್ಪಿ ಹೋಗುತ್ತದೋ ಎಂಬ ಭಯ ಪಾಕಿಸ್ತಾನಕ್ಕೆ ಶುರುವಾಗಿದೆ.

ಸದ್ಯಕ್ಕೆ ಪಿಒಕೆ ರಾಜಧಾನಿ ಮುಜಫರಾಬಾದ್, ರಾವಲಾಕೋಟ್, ಮೀರ್ಪುರ್, ಪೂಂಚ್ ಸೇರಿದಂತೆ ವಿವಿಧೆಡೆ ಪ್ರತಿಭಟನೆಯ ಕಾವು ಜೋರಾಗಿದೆ. ಪ್ರತಿಭಟನೆ ಹತ್ತಿಕ್ಕಲು ಪಾಕ್ ಸರ್ಕಾರ ಪ್ರತಿಭಟನಾಕಾರರನ್ನು ಬಂಧಿಸಿ ಗೋಲಿಬಾರ್ ನಡೆಸಿದ್ದು ಮತ್ತಷ್ಟು ಹಿಂಸಾಚಾರಕ್ಕೆ ತಿರುಗುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ಪ್ರತಿಭಟನೆಯ ಕಾವು ಇನ್ನಷ್ಟು ಜೋರಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments