Webdunia - Bharat's app for daily news and videos

Install App

ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಿಲ್ಲ: ಸ್ಪಷ್ಟಪಡಿಸಿದ ಕುಟುಂಬ

Krishnaveni K
ಸೋಮವಾರ, 16 ಡಿಸೆಂಬರ್ 2024 (09:09 IST)
Photo Credit: X
ಸ್ಯಾನ್ ಫ್ರಾನ್ಸಿಸ್ಕೊ: ಸಂಗೀತ ಲೋಕದ ಅಪ್ರತಿಮ ಸಾಧಕ, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ತಮ್ಮ 73 ನೆಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆಯೇ ಅವರಿಗೆ ಹೃದಯಾಘಾತವಾದ ಸುದ್ದಿ ಬಂದಿತ್ತು. ಆದರೆ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಬಳಿಕ ಕುಟುಂಬಸ್ಥರು ಸಾವನ್ನಪ್ಪಿಲ್ಲ, ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದರು.

ಆದರೆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರೇ ಸ್ಪಷ್ಟಪಡಿಸಿದ್ದಾರೆ. ಅಮೆರಿಕಾದಲ್ಲಿದ್ದ ಅವರು ತೀವ್ರ ರಕ್ತದೊತ್ತಡ, ಹೃದಯ ಸಂಬಂಧೀ ಖಾಯಿಲೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕೆ ಎರಡು ವಾರಗಳಿಂದ ಅಮೆರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಮೃತಪಟ್ಟಿರುವ ದುಃಖದ ವಾರ್ತೆ ಕೇಳಿಬಂದಿದೆ. 1951 ರಲ್ಲಿ ಜನಿಸಿದ್ದ ಜಾಕೀರ್ ಹುಸೇನ್ ಚಿಕ್ಕ ವಯಸ್ಸಿನಿಂದಲೂ ಸಂಗೀತ ವಾತಾವರಣದಲ್ಲೇ ಬೆಳೆದವರು. ಅವರು ತಬಲಾ ಹಿಡಿದರೆ ಜನ ಮಂತ್ರಮುಗ್ಧರಾಗಿ ವೀಕ್ಷಿಸುತ್ತಿದ್ದರು. ಅವರ ಕೈಗಳು ಚುರುಕಾಗಿ ಓಡುತ್ತಿದ್ದರೆ ತಬಲಾದಿಂದ ಅದ್ಭುತ ತಾಳ ಸೃಷ್ಟಿಯಾಗುತ್ತಿತ್ತು. ಭಾರತದ ಉನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಅವರು ತಮ್ಮದಾಗಿಸಿಕೊಂಡಿದ್ದರು. ಅವರ ನಿಧನಕ್ಕೆ ಸಂಗೀತ ಲೋಕ ಕಂಬನಿ ಮಿಡಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments