Webdunia - Bharat's app for daily news and videos

Install App

ಹಿಂದೂ ಸಂತರೆಲ್ಲಾ ಗೋಮಾಂಸ, ಮಟನ್ ಭಕ್ಷಕರು: ಝಾಕಿರ್ ನಾಯ್ಕ್

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (10:41 IST)
ಇಸ್ಲಾಮಾಬಾದ್: ಹಿಂದೂ ಸಾಧು ಸಂತರೆಲ್ಲಾ ಗೋಮಾಂಸ, ಮಟನ ನಂತಹ ಮಾಂಸಾಹಾರ ಭಕ್ಷಕರೇ ಎಂದು ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ವಿವಾದಿತ ಹೇಳಿಕೆ ನೀಡಿದ್ದಾನೆ.

ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಝಾಕಿರ್ ನಾಯ್ಕ್ ಇಂತಹದ್ದೊಂದು ಹೇಳಿಕೆ ನೀಡಿದ್ದಾನೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆತ ಹಿಂದೂ ಧರ್ಮದ ಸಾಧು ಸಂತರೆಲ್ಲಾ ಗೋಮಾಂಸ ಭಕ್ಷಕರು. ಅವರು ಮಟನ್ ಕೂಡಾ ತಿನ್ನುತ್ತಾರೆ. ಗೋಮಾಂಸ ನಿಷೇಧ ಎನ್ನುವುದು ಕೇವಲ ರಾಜಕೀಯಕ್ಕಷ್ಟೇ ಎಂದಿದ್ದಾನೆ.

ಮಹಿಳೆಯರಿಗೆ ಕಿರುಕುಳ ನೀಡಿದರೆ ಕೇವಲ 3 ವರ್ಷ ಶಿಕ್ಷೆಯಷ್ಟೇ. ಆದರೆ ಗೋಮಾಂಸ ಸೇವಿಸಿದರೆ ಭಾರತದಲ್ಲಿ 5 ವರ್ಷ ಕಠಿಣ ಶಿಕ್ಷೆ ನೀಡಲಾಗುತ್ತದೆ. ಇದು ಯಾವ ಸೀಮೆ ನ್ಯಾಯ ಎಂದು ಝಾಕಿರ್ ನಾಯ್ಕ್ ನಾಲಿಗೆ ಹರಿಬಿಟ್ಟಿದ್ದಾನೆ. ಈತನ ಭಾಷಣ ಈಗ ವಿವಾದಕ್ಕೆ ಕಾರಣವಾಗಿದೆ.

ನಿನ್ನೆಯಷ್ಟೇ ಕರ್ನಾಟಕ ಸರ್ಕಾರದ ಸಚಿವ ದಿನೇಶ್ ಗುಂಡೂರಾವ್ ಹಿಂದೂ ಕ್ರಾಂತಿಕಾರಿ ನಾಯಕ ವೀರ ಸಾವರ್ಕರ್ ಗೋಮಾಂಸ ಸೇವಿಸುತ್ತಿದ್ದರು ಎಂದು ವಿವಾದ ಸೃಷ್ಟಿಸಿದ್ದರು. ಅವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಝಾಕಿರ್ ನಾಯ್ಕ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು ಇಡೀ ಹಿಂದೂ ಸಂತರೆಲ್ಲರೂ ಗೋಮಾಂಸ ಭಕ್ಷಕರು ಎಂದಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments