Webdunia - Bharat's app for daily news and videos

Install App

ಐಪಿಎಲ್: ಫೈನಲಿಸ್ಟ್ ಗಳ ನಿರ್ಧಾರ ಮಾಡಿದ ಚಿನ್ನಸ್ವಾಮಿ ಪಂದ್ಯ

Webdunia
ಶನಿವಾರ, 20 ಮೇ 2017 (07:04 IST)
ಬೆಂಗಳೂರು: ಮತ್ತೊಂದು ಐಪಿಎಲ್ ಗೆಲ್ಲುವ ಕನಸಿನಲ್ಲಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ಗೆ ಮುಂಬೈ ಇಂಡಿಯನ್ಸ್ ತಣ್ಣೀರೆರಚಿದೆ. ನಿನ್ನೆ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಕೆಕೆಆರ್ ವಿರುದ್ಧ 6 ವಿಕೆಟ್ ಗೆಲುವು ಕಂಡಿದೆ.

 
ಇದರೊಂದಿಗೆ ಚೊಚ್ಚಲ ಐಪಿಎಲ್ ಗೆಲ್ಲುವ ಕನಸಿನಲ್ಲಿರುವ ಪುಣೆ ಸೂಪರ್ ಜೈಂಟ್ ಮತ್ತು ಎರಡು ಬಾರಿಯ ಚಾಂಪಿಯನ್ ಮುಂಬೈ ಫೈನಲ್ ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.

ಇದುವರೆಗೆ ಉತ್ತಮ ಲಹರಿಯಲ್ಲಿದ್ದ ಕೆಕೆಆರ್ ಬ್ಯಾಟಿಂಗ್ ನಿರ್ಣಾಯಕ ಪಂದ್ಯದಲ್ಲಿ ಕೈಕೊಟ್ಟಿದ್ದ ಸೋಲಿಗೆ ಕಾರಣವಾಯಿತು. ಮೊದಲು ಬ್ಯಾಟಿಂಗ್ ಮಾಡಿ ಕೇವಲ 107 ರನ್ ಗಳಿಗೆ ಆಲೌಟ್ ಆಯಿತು. ಮುಂಬೈ ಪರ ಘಾತಕ ಬೌಲಿಂಗ್ ನಡೆಸಿದ ಕರಣ್ ಶರ್ಮಾ 16 ರನ್ ಗಳಿಗೆ 4 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತ ಸಾಥ್ ನೀಡಿದರು.

ನಂತರ ಬ್ಯಾಟಿಂಗ್ ಮಾಡಿದ ಮುಂಬೈ 33 ಬಾಲ್ ಬಾಕಿಯಿರುವಂತೆ ನಾಲ್ಕು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಕೃನಾಲ್ ಪಾಂಡ್ಯ ಮತ್ತು ರೋಹಿತ್ ಶರ್ಮಾ 50 ರನ್ ಗಳ ಜತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments