Webdunia - Bharat's app for daily news and videos

Install App

ಮತ್ತೊಮ್ಮೆ ಆರ್ ಸಿಬಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

Webdunia
ಗುರುವಾರ, 6 ಏಪ್ರಿಲ್ 2017 (08:24 IST)
ಹೈದರಾಬಾದ್: ಕಳೆದ ಐಪಿಎಲ್ ನಲ್ಲಿ ಅನುಭವಿಸಿದ ನಿರಾಸೆ ಮತ್ತೊಮ್ಮೆ ಈ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್ ಸಿಬಿ ತಂಡಕ್ಕೆ ಎದುರಾಯಿತು. ಇನ್ನೇನು ಗೆಲುವು ಸಿಕ್ಕಿತು ಎನ್ನುವಾಗ ಮುಗ್ಗರಿಸಿತು.

 

10 ನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲೇ ಕೇವಲ 35 ರನ್ ಗಳಿಂದ ಸೋಲನುಭವಿಸಿತು. ಗೆಲುವಿಗೆ 207 ರನ್ ಚೇಸ್ ಮಾಡುವಾಗ ವಿರಾಟ್ ಕೊಹ್ಲಿ ಇದ್ದಿದ್ದರೆ, ಪಂದ್ಯದ ಚಿತ್ರಣ ಬದಲಾಗುತ್ತಿತ್ತೇನೋ.

 
ಆದರೂ ಕೇದಾರ್ ಜಾದವ್ 33 ರನ್ ಗಳಿಸಿದ್ದಾಗ ರನೌಟ್ ಆಗದೇ ಇದ್ದಿದ್ದರೆ, ಬಹುಶಃ ಪಂದ್ಯ ಆರ್ ಸಿಬಿ ಪಾಲಾಗುತ್ತಿತ್ತು. ಆದರೆ ದುರದೃಷ್ಟ ನೋಡಿ. ಜಾದವ್ ವಿಕೆಟ್ ಕಳೆದುಕೊಂಡ ಮೇಲೆ ಇನ್ಯಾರೂ ಗೆಲ್ಲುವ ಪ್ರಯತ್ನ ನಡೆಸಲಿಲ್ಲ. 172 ರನ್ ಗಳಿಗೆ ಆಲೌಟ್ ಆಯಿತು.

 
ಯುವರಾಜ್ ಸಿಂಗ್ ಮತ್ತೊಮ್ಮೆ ಹೀರೋ ಆದರು. ಅವರು 27 ಎಸೆತಗಳಲ್ಲಿ 7 ಬೌಂಡರಿ 3 ಸಿಕ್ಸರ್ ಗಳ 62 ರನ್ ಸಿಡಿಸಿ ಅಬ್ಬರಿಸಿದರು. ಆಫ್ಘನ್ ಆಟಗಾರ ರಶೀದ್ ಖಾನ್ ಈ ಪಂದ್ಯದಲ್ಲಿ ಪದಾರ್ಪಣೆ ಮಾಡಿದರಲ್ಲದೆ, 2 ವಿಕೆಟ್ ಕಿತ್ತು ಗಮನ ಸೆಳೆದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments