Webdunia - Bharat's app for daily news and videos

Install App

ಐಪಿಎಲ್: ಆರ್ ಸಿಬಿಗೆ ಥ್ರಿಲ್ಲಿಂಗ್ ಗೆಲುವು

Webdunia
ಸೋಮವಾರ, 22 ಏಪ್ರಿಲ್ 2019 (07:00 IST)
ಬೆಂಗಳೂರು: ಸತತ ಸೋಲಿನಿಂದ ಟೀಕೆಗೊಳಗಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಪಡೆಯನ್ನು ರೋಚಕ 1 ರನ್ ನಿಂದ ಸೋಲಿಸಿದೆ.

 
ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಾಯಕ ಕೊಹ್ಲಿಯನ್ನು ಆರಂಭದಲ್ಲಿಯೇ ಕಳೆದುಕೊಂಡು ಆತಂಕಕ್ಕೀಡಾಯಿತು. ಆದರೆ ಬಳಿಕ ಪಾರ್ಥಿವ್ ಪಟೇಲ್ ಅರ್ಧಶತಕ ಸಿಡಿಸಿ (53) ತಂಡಕ್ಕೆ ಆಧಾರವಾದರು. ಇದರಿಂದಾಗಿ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಚೆನ್ನೈ ಆರಂಭದಲ್ಲಿ ಕುಸಿತದ ಹಾದಿಯಲ್ಲಿತ್ತು. ತೀರಾ ಹೀನಾಯ ಸೋಲು ಕಾಣುತ್ತದೆ ಎಂದಾಗ ನಾಯಕನ ಆಟವಾಡಿದ ಧೋನಿ 48 ಎಸೆತಗಳಲ್ಲಿ 84 ರನ್ ಸಿಡಿಸಿ ಗೆಲುವಿನ ಅಂಚಿಗೆ ತಂದು ನಿಲ್ಲಿಸಿದರು. ಆದರೆ ಅಂತಿಮ ಎಸೆತದಲ್ಲಿ ಬೆಸ್ಟ್ ಫಿನಿಶರ್ ಧೋನಿ ಉಮೇಶ್ ಯಾದವ್ ಎಸೆತದಲ್ಲಿ ಔಟಾದರು. ಆಗ ಚೆನ್ನೈ ಗೆಲುವಿಗೆ ಒಂದೇ ರನ್ ದೂರದಲ್ಲಿತ್ತು! ಈ ಮೂಲಕ ಬೆಂಗಳೂರಿಗೆ ರೋಚಕ ಜಯ ದಾಖಲಾಯ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments