Select Your Language

Notifications

webdunia
webdunia
webdunia
webdunia

ಐಪಿಎಲ್: ಕೊನೆಯ ಪಂದ್ಯದಲ್ಲಿ ಗೆದ್ದ ಬಳಿಕ ಅಭಿಮಾನಿಗಳ ಕ್ಷಮೆ ಯಾಚಿಸಿದ ಆರ್ ಸಿಬಿ

ಐಪಿಎಲ್: ಕೊನೆಯ ಪಂದ್ಯದಲ್ಲಿ ಗೆದ್ದ ಬಳಿಕ ಅಭಿಮಾನಿಗಳ ಕ್ಷಮೆ ಯಾಚಿಸಿದ ಆರ್ ಸಿಬಿ
ಬೆಂಗಳೂರು , ಭಾನುವಾರ, 5 ಮೇ 2019 (07:09 IST)
ಬೆಂಗಳೂರು: ಈ ಬಾರಿ ಐಪಿಎಲ್ ನ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 4 ವಿಕೆಟ್ ಗಳ ಜಯ ಸಾಧಿಸಿದೆ. ಆದರೆ ಅಂಕಪಟ್ಟಿಯಲ್ಲಿ 7 ನೇ ಸ್ಥಾನ ಪಡೆದ ಆರ್ ಸಿಬಿ ಈ ಪಂದ್ಯದೊಂದಿಗೆ ಈ ವರ್ಷದ ಐಪಿಎಲ್ ಕೂಟದಿಂದ ಹೊರಬಿದ್ದಿದೆ.


ಅಂತಿಮ ಪಂದ್ಯದಲ್ಲಿ ಗೆಲುವಿನ ಬಳಿಕ ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಈ ಬಾರಿಯ ನಿರಾಶಾದಾಯಕ ಪ್ರದರ್ಶನಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದರು. ಅಲ್ಲದೆ ತಮಗೆ ನೀಡಿದ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 175 ರನ್ ಗಳಿಸಿತು. ಕೇನ್ ವಿಲಿಯಮ್ಸ್ 70 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 75 ರನ್ ಗಳಿಸಿದ ಹೆಟ್ ಮೇರ್ ಮತ್ತು 65 ರನ್ ಗಳಿಸಿದ ಗುರ್ ಕೀರತ್ ಸಿಂಗ್ ಆಸರೆಯಾದರು. ಇವರ ಅದ್ಭುತ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್: ಕೋಲ್ಕೊತ್ತಾ ತಂಡದ ಕಿತ್ತಾಟ ಮೈದಾನದಲ್ಲೇ ಬಹಿರಂಗ