Webdunia - Bharat's app for daily news and videos

Install App

ಐಪಿಎಲ್ ನಲ್ಲಿ ಹೊಸ ವಿವಾದ ಸೃಷ್ಟಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಆರ್ ಅಶ್ವಿನ್

Webdunia
ಮಂಗಳವಾರ, 26 ಮಾರ್ಚ್ 2019 (15:42 IST)
ಜೈಪುರ: ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನನ್ನು ವಿವಾದಾತ್ಮಕವಾಗಿ ಔಟ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ರವಿಚಂದ್ರನ್ ಅಶ್ವಿನ್ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.


185 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ಪರ ಜೋಸ್ ಬಟ್ಲರ್ ಅದ್ಭುತವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದರು. ಬಹುಶಃ ಅವರು ಕೊನೆಯವರೆಗೂ ಉಳಿದುಕೊಳ್ಳುತ್ತಿದ್ದರೆ ರಾಜಸ್ಥಾನ್‍ ತಂಡವೇ ಈ ಪಂದ್ಯ ಗೆಲ್ಲುತ್ತಿತ್ತು.

ಆದರೆ 69 ರನ್ ಗಳಿಸಿದ್ದಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಬಟ್ಲರ್ ರನ್ನು ಅಶ್ವಿನ್ ಔಟ್ ಮಾಡಿದ ರೀತಿ ವಿವಾದಕ್ಕೆ ಕಾರಣವಾಗಿದೆ. ಕ್ರೀಸ್ ಬಿಟ್ಟಿದ್ದ ಬಟ್ಲರ್ ರನ್ನು ಬೌಲಿಂಗ್ ಸಜ್ಜಾಗಿದ್ದ ಅಶ್ವಿನ್ ವಿಕೆಟ್ ಗೆ ಬಾಲ್ ತಾಗಿಸಿ ರನೌಟ್ ಮಾಡಿದ್ದರು. ಇದು ಕ್ರಿಕೆಟ್ ನಲ್ಲಿ ತಪ್ಪೇನೂ ಅಲ್ಲ. ಹಾಗಿದ್ದರೂ ಈ ರೀತಿಯಾಗಿ ಔಟ್ ಮಾಡಿದ್ದು ಸರಿಯಲ್ಲ ಎನ್ನುವುದು ರಾಜಸ್ಥಾನ್ ಸಮರ್ಥಕರ ವಾದ.

ಈ ಔಟ್ ಇದೀಗ ಟ್ವಿಟರ್ ಸೇರಿದಂತೆ, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರವಿಚಂದ್ರನ್ ಅಶ್ವಿನ್ ನಾವು ಮಾಡಿದ್ದು ತಪ್ಪಲ್ಲ, ಕ್ರಿಕೆಟ್ ನಲ್ಲಿ ಇಂತಹದ್ದೆಲ್ಲಾ ಸರ್ವೇ ಸಾಮಾನ್ಯ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments