Webdunia - Bharat's app for daily news and videos

Install App

ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಪಾಲಿಗೆ ವಿಲನ್ ಆದ ರವೀಂದ್ರ ಜಡೇಜಾ

Webdunia
ಮಂಗಳವಾರ, 14 ಮೇ 2019 (07:32 IST)
ಚೆನ್ನೈ: ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 1 ರನ್ ನಿಂದ ಸೋತ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಆಕ್ರೋಶ ರವೀಂದ್ರ ಜಡೇಜಾ ಮೇಲೆ ತಿರುಗಿದೆ.


ಫೈನಲ್ ಓವರ್ ನಲ್ಲಿ ಚೆನ್ನೈ ಗೆಲುವಿಗೆ 9 ರನ್ ಬೇಕಾಗಿತ್ತು. ಅದ್ಭುತವಾಗಿ ಆಡುತ್ತಿದ್ದ ಶೇನ್ ವ್ಯಾಟ್ಸನ್ ಕ್ರೀಸ್ ನಲ್ಲಿ ಇದ್ದಿದ್ದರಿಂದ ಚೆನ್ನೈ ಗೆಲ್ಲಬಹುದು ಎಂದೇ ಅಭಿಮಾನಿಗಳ ನಿರೀಕ್ಷೆಯಾಗಿತ್ತು.

ಆದರೆ 19 ನೇ ಓವರ್ ನಲ್ಲಿ ಬ್ಯಾಟಿಂಗ್ ಗಿಳಿದಿದ್ದ ಜಡೇಜಾ ಐದು ಎಸೆತ ಎದುರಿಸಿ ಐದೇ ರನ್ ಗಳಿಸಿದರು. ಅಷ್ಟು ಮಾತ್ರವಲ್ಲದೆ, ಶೇನ್ ವ್ಯಾಟ್ಸನ್ ರನೌಟ್ ಗೆ ಕಾರಣರಾದರು. ಹೀಗಾಗಿ ಅಭಿಮಾನಿಗಳ ಆಕ್ರೋಶ ಜಡೇಜಾ ಮೇಲೆ ತಿರುಗಿದೆ. ಜಡೇಜಾರಂತಹವರು ಇದ್ದರೆ ಎದುರಾಳಿಗಳಿಗೆ ಕೆಲಸವೇ ಇರಲ್ಲ. ಅವರೇ ತಂಡವನ್ನು ಸೋಲಿಸುತ್ತಾರೆ ಎಂದು ಜಡೇಜಾರನ್ನು ಟ್ವಿಟರಿಗರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments