Select Your Language

Notifications

webdunia
webdunia
webdunia
webdunia

ಐಪಿಎಲ್ 13: ಕೆಎಲ್ ರಾಹುಲ್ ಪಡೆಗೆ ವಿಘ್ನ ಸಂತೋಷಿಯಾದ ಚೆನ್ನೈ ಸೂಪರ್ ಕಿಂಗ್ಸ್

ಐಪಿಎಲ್ 13: ಕೆಎಲ್ ರಾಹುಲ್ ಪಡೆಗೆ ವಿಘ್ನ ಸಂತೋಷಿಯಾದ ಚೆನ್ನೈ ಸೂಪರ್ ಕಿಂಗ್ಸ್
ದುಬೈ , ಸೋಮವಾರ, 2 ನವೆಂಬರ್ 2020 (09:19 IST)
ದುಬೈ: ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಲೇ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಕೊನೆಯ ಹಂತದಲ್ಲಿ ಗೆಲುವಿನೊಂದಿಗೆ ಬೇರೆ ತಂಡಗಳ ಪ್ಲೇ ಆಫ್ ಕನಸಿಗೆ ವಿಘ್ನ ಸಂತೋಷಿಯಾಗುತ್ತಿದೆ.


ನಿನ್ನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿ ತಾನು ಕೂಟದಿಂದ ಹೊರಬಿದ್ದಿರುವುದಲ್ಲದೆ, ಪಂಜಾಬ್ ನ್ನೂ ಹೊರನೂಕಿದೆ. ನಿನ್ನೆಯ ಸೋಲಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ 18.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಆದರೆ ಈ ಗೆಲುವು ಚೆನ್ನೈಗೂ ಲಾಭವಿಲ್ಲ, ಅತ್ತ ಪಂಜಾಬ್ ಕನಸೂ ಕಮರುವಂತೆ ಮಾಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಶರ್ಮಾ ಕೈ ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ