ಐಪಿಎಲ್ 13: ಮೊಹಮ್ಮದ್ ಸಿರಾಜ್ ದಾಳಿಗೆ ಕೋಲ್ಕೊತ್ತಾ ಚಿಂದಿ

Webdunia
ಗುರುವಾರ, 22 ಅಕ್ಟೋಬರ್ 2020 (08:52 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪವರ್ ಏನೆಂದು ನಿನ್ನೆ ಎಲ್ಲಾ ತಂಡಗಳಿಗೂ ಮನವರಿಕೆಯಾಗಿರುತ್ತದೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್ ಮತ್ತು ಬ್ಯಾಟಿಂಗ್ ನಲ್ಲಿ ದೇವದತ್ತ್ ಪಡಿಕ್ಕಲ್ ಮನೋಹರ ಹೊಡೆತಗಳ ಮೂಲಕ ಕೆಕೆಆರ್ ವಿರುದ್ಧದ ಪಂದ್ಯವನ್ನು ಚಿಂದಿ ಉಡಾಯಿಸಿದ್ದಾರೆ.


ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾಗೆ 35 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿತ್ತು. ಆದರೆ ಈ ಹಂತದಲ್ಲಿ ನಾಯಕ ಇಯಾನ್ ಮಾರ್ಗನ್ 30 ರನ್ ಗಳಿಸಿ ಕೊಂಚ ಚೇತರಿಕೆ ನೀಡಿದರು. ಆದರೂ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 84 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ ಸಿಬಿ ಪರ ಅದ್ಭುತ ಬೌಲಿಂಗ್ ನಡೆಸಿದ ಮೊಹಮ್ಮದ್ ಸಿರಾಜ್ 8 ರನ್ ನೀಡಿ 3 ವಿಕೆಟ್, ಯಜುವೇಂದ್ರ ಚಾಹಲ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಕಬಳಿಸಿದರು. ಆರ್ ಸಿಬಿ ಬೌಲರ್ ಗಳೆಲ್ಲರೂ ಎದುರಾಳಿಗಳಿಗೆ ರನ್ ಗಳಿಸಲು ಪರದಾಡುವಂತೆ ಮಾಡಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಗೆ ಎಂದಿನಂತೆ ದೇವದತ್ತ್ ಪಡಿಕ್ಕಲ್-ಏರಾನ್ ಫಿಂಚ್ ಜೋಡಿ ಉತ್ತಮ ಆರಂಭ ನೀಡಿದರು. ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಜೋಡಿ ನಂತರ ಉತ್ತಮ ಹೊಡೆತಗಳಿಗೆ ಕೈ ಹಾಕಿತು. ಈ ನಡುವೆ ಏರಾನ್ ಫಿಂಚ್ ಔಟಾದರು. ಬಳಿಕ ನಾಯಕ ವಿರಾಟ್ ಕೊಹ್ಲಿ ಅಜೇಯ 18 ಮತ್ತು ಗುರುಕೀರತ್ ಸಿಂಗ್ ಅಜೇಯ 21 ರನ್ ಗಳಿಸಿ 13.3 ಓವರ್ ಗಳಲ್ಲೇ 85 ರನ್ ಗುರಿ ತಲುಪಿ ತಂಡಕ್ಕೆ 8 ವಿಕೆಟ್ ಗಳ ಸುಲಭ ಜಯ ಕೊಡಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಪಾಕಿಸ್ತಾನವನ್ನು ಭಾರತ ಸರ್ಕಾರ, ಆಟಗಾರರು ಬಹಿಷ್ಕರಿಸಬೇಕು: ಸಂಜಯ್ ಸಿಂಗ್‌

ಹತ್ತಿರ ಬರಲು ಸಂಕೋಚಪಟ್ಟ ಭದ್ರತಾ ಸಿಬ್ಬಂದಿ: ಹಾರ್ದಿಕ್ ಪಾಂಡ್ಯ ಮಾಡಿದ್ದೇನು Video

ಭಾರತದ ಜೊತೆ ವಿಶ್ವಕಪ್ ಆಡಲ್ಲ ಎಂದ ಪಾಕಿಸ್ತಾನ: ಅಭಿಷೇಕ್ ಶರ್ಮಾ ಭಯಾನಾ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments