Publish Date: Fri, 09 Oct 2020 (09:19 IST)
Updated Date: Fri, 09 Oct 2020 (09:22 IST)
ದುಬೈ: ಐಪಿಎಲ್ 13 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸತತ ಸೋಲಿನ ಬಳಿಕ ನಾಯಕ ಕೆಎಲ್ ರಾಹುಲ್ ಭಾರೀ ಟೀಕೆಗೊಳಗಾಗುತ್ತಿದ್ದಾರೆ.
ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ನಾಯಕತ್ವ ವಹಿಸಿ ಮೊದಲ ಪಂದ್ಯಗಳಲ್ಲಿ ಆಶಾದಾಯಕ ಪ್ರದರ್ಶನ ನೀಡಿದ್ದರು. ಆದರೆ ಮೊದಲ ಪಂದ್ಯದ ನಂತರ ರಾಹುಲ್ ನಾಯಕತ್ವದಲ್ಲಿ ಇದುವರೆಗೆ ಪಂದ್ಯ ಗೆದ್ದಿಲ್ಲ. ಹೀಗಾಗಿ ಟ್ವಿಟರಿಗರು ರಾಹುಲ್ ಮೇಲೆ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ರಾಹುಲ್ ಗೆ ಸ್ವಹಿತಾಸಕ್ತಿಯೇ ಹೆಚ್ಚಾಗಿದೆ. ಅವರು ತಮ್ಮ ಬ್ಯಾಟಿಂಗ್ ಕಡೆಗೆ ಗಮನ ಕೊಟ್ಟು, ಹೆಚ್ಚು ರನ್ ಗಳಿಸಿ ಸಹ ಆಟಗಾರ ಮಯಾಂಕ್ ಜತೆಗೆ ಪೈಪೋಟಿಗೆ ಬಿದ್ದಿದ್ದಾರೆ. ಆರೆಂಜ್ ಕ್ಯಾಪ್ ಉಳಿಸಿಕೊಳ್ಳುವುದಷ್ಟೇ ಅವರ ಗುರಿಯಾಗಿದೆ ಎಂದು ಟ್ವಿಟರಿಗರು ಟೀಕಿಸಿದ್ದಾರೆ.