ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸುವುದು ಆರ್ ಸಿಬಿಗೆ ಸುಲಭದ ಕೆಲಸವಲ್ಲ!

Webdunia
ಸೋಮವಾರ, 9 ನವೆಂಬರ್ 2020 (11:26 IST)
ಬೆಂಗಳೂರು: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಪ್ರದರ್ಶನ ನೀಡಿದ ಮೇಲೆ ಹಲವರು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸುವ ಮಾತನಾಡುತ್ತಿದ್ದಾರೆ.


ಈ ನಡುವೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರೆ ಆರ್ ಸಿಬಿ ಸಮಸ್ಯೆ ಬಗೆಹರಿಯಲ್ಲ ಎಂದಿದ್ದಾರೆ. ಅದು ನಿಜ ಕೂಡಾ. ಸದ್ಯಕ್ಕೆ ಕೊಹ್ಲಿ ಬಿಟ್ಟರೆ ಆರ್ ಸಿಬಿಯಲ್ಲಿ ಸಮರ್ಥ ನಾಯಕರಿಲ್ಲ. ಎಬಿಡಿ ವಿಲಿಯರ್ಸ್ ಇದ್ದರೂ ಅವರ ಮೇಲೆ ಈಗಾಗಲೇ ಬ್ಯಾಟಿಂಗ್ ನ ಹೊಣೆಯಿದೆ. ನಾಯಕನಾಗಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸದೇ ಇದ್ದರೂ ಕೊಹ್ಲಿ ಹಲವು ಯುವ ಟ್ಯಾಲೆಂಟ್ ಗಳನ್ನು ಹುಟ್ಟು ಹಾಕಿದ್ದಾರೆ. ಇದು ಅವರ ಪಾಲಿಗೆ ಪ್ಲಸ್ ಪಾಯಿಂಟ್. ಯಾವುದೇ ಯುವ ಆಟಗಾರನಿಗೆ ನಾಯಕತ್ವದ ಹೊಣೆ ನೀಡಿದರೆ ಆರ್ ಸಿಬಿಗೆ ಆ ನಾಯಕನಿಗೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ಹೀಗಾಗಿ ಸದ್ಯಕ್ಕೆ ಕೊಹ್ಲಿಯನ್ನು ಬದಲಾಯಿಸುವ ಬದಲು ತಂಡವನ್ನು ಬಲಪಡಿಸುವ ಬಗ್ಗೆ ಆರ್ ಸಿಬಿ ಚಿಂತನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments