Select Your Language

Notifications

webdunia
webdunia
webdunia
webdunia

ಐಪಿಎಲ್‌ ಕಪ್‌ ಗೆದ್ದ ಆರ್‌ಸಿಬಿ ತಂಡವನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಡಿಸಿಎಂ ಡಿಕೆಶಿ

Indian Premier League, Royal Challengers Bangalore, Deputy Chief Minister D.K. Shivakumar

Sampriya

ಬೆಂಗಳೂರು , ಬುಧವಾರ, 4 ಜೂನ್ 2025 (14:36 IST)
ಬೆಂಗಳೂರು: ಐಪಿಎಲ್‌ ಕಪ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ರಾಜ್ಯಕ್ಕೆ ಬಂದಿಳಿದಿದೆ. ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ತಂಡವನ್ನು ಅದ್ದೂರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬರಮಾಡಿಕೊಂಡರು.

ಇದಕ್ಕೂ ಮುನ್ನ ಮಾತನಾಡಿದ್ದ ಡಿಕೆಶಿ, ಆರ್‌ಸಿಬಿ  ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಹಾಗೂ ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್‌ ಮಣಿಸಿ ಆರ್‌ಸಿಬಿ ಮೊದಲ ಬಾರಿ ಕಪ್‌ ಗೆದ್ದಿತ್ತು. 18 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಬೆಂಗಳೂರು ತಂಡದ ಮೊದಲ ಬಾರಿ ಕಪ್‌ ಗೆದ್ದಿದೆ. 

ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್‌ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದು ಡಿಕೆಶಿ ಹೇಳಿದರು. 

ಮೆರವಣಿಗೆ, ವಿಜಯೋತ್ಸವ ಅನುಮತಿ ಕುರಿತು ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಆರ್‌ಸಿಬಿಗೆ ಐಪಿಎಲ್‌ ಕಿರೀಟ: ದೂರದಿಂದಲೇ ಭಾವುಕ ಪೋಸ್ಟ್‌ ಹಂಚಿಕೊಂಡ ಮಾಜಿ ಮಾಲೀಕ ವಿಜಯ್‌ ಮಲ್ಯ