Webdunia - Bharat's app for daily news and videos

Install App

ಆರ್‌ಸಿಬಿಗೆ ಸಾರಥಿಯಾಗುವಂತೆ ಪಾಟೀದಾರ್‌ಗೆ ವರ್ಷದ ಹಿಂದೆಯೇ ಸುಳಿವು ನೀಡಿದ್ದ ಫ್ಲವರ್‌

Sampriya
ಗುರುವಾರ, 13 ಫೆಬ್ರವರಿ 2025 (21:09 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕನಾಗಿ ಆಯ್ಕೆಯಾಗಿರುವ ರಜತ್‌ ಪಾಟೀದರ್‌ ಅವರಿಗೆ ವರ್ಷದ ಹಿಂದೇ ಸಾರಥಿಯಾಗುವ ಸುಳಿವನ್ನು ನೀಡಲಾಗಿತ್ತು. ಈ ಕುರಿತು ಅವರೇ ಸ್ಪಷ್ಟಪಡಿಸಿದ್ದಾರೆ.

ಆರ್‌ಸಿಬಿ ತಂಡಕ್ಕೆ ಗುರುವಾರ ರಜತ್ ಪಾಟಿದಾರ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಮತ್ತೆ ತಂಡದ ನಾಯಕನಾಗುತ್ತಾರೆ ಎಂದು ಊಹಿಸಲಾಗಿತ್ತು. ಆದರೆ, 31 ವರ್ಷದ ರಜತ್ ಪಾಟಿದಾರ್‌ ಅವರಿಗೆ ಮಣೆ ಹಾಕಲಾಗಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ರಿಟೇಟ್‌ ಆಟಗಾರರಲ್ಲಿ ರಜತ್ ಪಾಟಿದಾರ್ ಕೂಡ ಒಬ್ಬರಾಗಿದ್ದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡವನ್ನು ಮುನ್ನಡೆಸಿರುವ ಅನುಭವ ಅವರಿಗಿದೆ.

ರಜತ್ ಪಾಟೀದಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಐಪಿಎಲ್ 2024ರಲ್ಲಿಯೇ ತಂಡದ ಕೋಚ್ ಆಂಡಿ ಫ್ಲವರ್ ನನ್ನನ್ನು ಆರ್‌ಸಿಬಿ ನಾಯಕನಾಗಲು ಬಯಸುತ್ತೀರಾ ಎಂದು ಕೇಳಿದ್ದರು. ನನ್ನ ರಾಜ್ಯ ಮಧ್ಯಪ್ರದೇಶ ತಂಡವನ್ನು ದೇಶೀಯ ಕ್ರಿಕೆಟ್‌ನಲ್ಲಿ ನಾಯಕತ್ವ ವಹಿಸುವ ಮೂಲಕ ಬಹಳಷ್ಟು ಕಲಿಯಲು ಬಯಸುತ್ತೇನೆ. ಆಗ ಮಾತ್ರ ನಾನು ನಾಯಕನಾಗಬಲ್ಲೆ ಎಂದು ಕೋಚ್‌ಗೆ ಹೇಳಿದ್ದೆ. ಅಂದೇ ನನಗೆ ಆರ್‌ಸಿಬಿ ತಂಡದ ನಾಯಕನಾಗುವ ಸುಳಿವು ದೊರಕಿತ್ತು ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments