Publish Date: Thu, 26 May 2022 (10:30 IST)
Updated Date: Thu, 26 May 2022 (08:57 IST)
ಮುಂಬೈ: ಕಳಪೆ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಈಗ ಭರ್ಜರಿ ಜ್ಯಾಕ್ ಪಾಟ್ ಹೊಡೆದಿದ್ದಾರೆ.
ಐಪಿಎಲ್ ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ಗುಜರಾತ್ ತಂಡಕ್ಕೆ ಮೊದಲ ಬಾರಿಗೆ ನಾಯಕರಾಗಿ ಬಂದ ಹಾರ್ದಿಕ್ ಪಾಂಡ್ಯ ತಮ್ಮ ಮೇಲಿದ್ದ ಅಭಿಪ್ರಾಯವನ್ನೇ ಬದಲಾಯಿಸಿದರು.
ಸ್ವತಃ ತಾವೇ ಬ್ಯಾಟಿಂಗ್ ನಲ್ಲಿ ಮಿಂಚಿದ್ದಲ್ಲದೆ ತಂಡವನ್ನು ಫೈನಲ್ ಗೆ ಕೊಂಡೊಯ್ದಿರುವ ಹಾರ್ದಿಕ್ ನಾಯಕತ್ವದ ಬಗ್ಗೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದು ಅವರು ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ವೇದಿಕೆಯಾಗಿದೆ. ಒಂದು ವೇಳೆ ಹಾರ್ದಿಕ್ ಈ ಐಪಿಎಲ್ ಗೆದ್ದರೆ ಅದು ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ಆಗಲಿದೆ.