Webdunia - Bharat's app for daily news and videos

Install App

ಐಪಿಎಲ್ 14: ಯಾವ ತಂಡಕ್ಕೆ ಯಾರು ಕೋಚ್? ಇಲ್ಲಿದೆ ಮಾಹಿತಿ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (08:50 IST)
ದುಬೈ: ಐಪಿಎಲ್ 14 ಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಯಾವ ತಂಡಕ್ಕೆ ಯಾರು ಕೋಚ್ ಎಂಬ ಮಾಹಿತಿಯನ್ನು ನೋಡೋಣ.


ರಾಯಲ್ ಚಾಲೆಂಜರ್ಸ್ ಬೆಂಗಳೂರು: ತಂಡದ ಕೋಚ್ ಆಗಿದ್ದ ಸಿಮನ್ ಕಾಟಿಚ್ ರಾಜೀನಾಮೆ ನೀಡಿದ ಬೆನ್ನಲ್ಲೇ ಮೈಕ್ ಹಸನ್ ಮುಖ್ಯ ಕೋಚ್ ಆಗಿ ಬಡ್ತಿ ಪಡೆದಿದ್ದಾರೆ. ಐಪಿಎಲ್ 14 ರ ಎರಡನೇ ಹಂತದಲ್ಲಿ ಅವರೇ ಕೋಚ್ ಆಗಿ ಮುಂದುವರಿಯಲಿದ್ದಾರೆ.

ಕಿಂಗ್ಸ್ ಪಂಜಾಬ್: ಕನ್ನಡಿಗ ಕೆಎಲ್ ರಾಹುಲ್ ನಾಯಕರಾಗಿರುವ ಪಂಜಾಬ್ ತಂಡಕ್ಕೆ ಕನ್ನಡಿಗ, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಕೋಚ್. ರಾಹುಲ್-ಕುಂಬ್ಳೆ ಜೋಡಿ ಇದುವರೆಗೆ ಯಶಸ್ವೀ ಪ್ರದರ್ಶನ ಕಾಯ್ದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್: ಈ ತಂಡಕ್ಕೆ ಧೋನಿಯೇ ಆಧಾರ ಸ್ತಂಬ. ಹಾಗಿದ್ದರೂ ಕೋಚ್ ಎಂದು ಇರಲೇಬೇಕಲ್ಲ? 2009 ರಿಂದಲೂ ಧೋನಿಗೆ ಜೊತೆಯಾಗಿರುವುದು ಕೋಚ್ ಸ್ಟೀಫನ್ ಫ್ಲೆಮಿಂಗ್. ಈಗಲೂ ಅವರೇ ಮುಂದುವರಿದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಮುಂಬೈ ಇಂಡಿಯನ್ಸ್ ಬಳಿಕ ಡೆಲ್ಲಿ ತಂಡಕ್ಕೆ ಕೋಚ್ ಆಗಿ ಸೇರಿಕೊಂಡಿದ್ದಾರೆ. ಈಗಲೂ ಅವರೇ ಮುಂದುವರಿದಿದ್ದಾರೆ.

ಮುಂಬೈ ಇಂಡಿಯನ್ಸ್: 2018 ರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಶ್ರೀಲಂಕಾ ಬ್ಯಾಟಿಂಗ್ ದಿಗ್ಗಜ ಮಹೇಲ ಜಯವರ್ಧನೆ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್: ಈ ತಂಡಕ್ಕೆ ನಾಯಕನ ಜೊತೆಗೆ ಕೋಚ್ ಕೂಡಾ ವಿದೇಶೀಯರೇ. 2019 ರಿಂದ ಟ್ರವರ್ ಬೇಲಿಸಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜಸ್ಥಾನ್ ರಾಯಲ್ಸ್: ಶ್ರೀಲಂಕಾದ ದಿಗ್ಗಜ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕುಮಾರ ಸಂಗಕ್ಕಾರ ಕಳೆದ ವರ್ಷದಿಂದ ತಂಡದ ಮುಖ್ಯ ನಿರ್ದೇಶಕ ಮತ್ತು ಕೋಚ್ ಆಗಿ ಕಾರ್ಯನಿರ್ವಹಣೆ ಪ್ರಾರಂಭ ಮಾಡಿದ್ದಾರೆ.

ಕೋಲ್ಕೊತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡದ ಮಾಜಿ ನಾಯಕರಾಗಿದ್ದ ಬ್ರೆಂಡಮ್ ಮೆಕ್ಕಲಮ್ ಈಗ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂಡದ ಬಗ್ಗೆ ಚೆನ್ನಾಗಿ ಬಲ್ಲ ಮೆಕ್ಕಲಮ್ 2020 ರಿಂದ ತಂಡದ ಕೋಚ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments