Webdunia - Bharat's app for daily news and videos

Install App

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

Sampriya
ಶನಿವಾರ, 19 ಏಪ್ರಿಲ್ 2025 (00:48 IST)
Photo Courtesy X
ಬೆಂಗಳೂರು: ರಜತ್‌ ಪಾಟೀದಾರ್‌ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಐದು ವಿಕೆಟ್‌ಗಳಿಂದ ಸೋತಿತು. ಇದು ತವರಿನಲ್ಲಿ ಆರ್‌ಸಿಬಿ ತಂಡಕ್ಕೆ ಹ್ಯಾಟ್ರಿಕ್‌ ಸೋಲಾಗಿದೆ.

ಮಳೆಯಿಂದಾಗಿ ಸುಮಾರು 2 ಗಂಟೆ ತಡವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯವನ್ನು 14 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಪಂಜಾಬ್ ಬೌಲರ್‌ಗಳ ದಾಳಿ ಮತ್ತು ಫೀಲ್ಡರ್‌ಗಳ ಚುರುಕಾದ ಆಟದ ಮುಂದೆ ಆರ್‌ಸಿಬಿಯು ನಿಗದಿತ ಓವರ್‌ಗಳಲ್ಲಿ  9 ವಿಕೆಟ್‌ಗಳಿಗೆ 95 ರನ್ ಪೇರಿಸಿತು.

ಆರ್‌ಸಿಬಿ ಪರ ಟಿಮ್ ಡೇವಿಡ್ ಅವರ ಆಕರ್ಷಕ ಅರ್ಧಶತಕ (50; 26ಎ, 4X5, 6X3) ಗಳಿಸಿ ಮಿಂಚಿದರು. ನಾಯಕ ರಜತ್ ಪಾಟೀದಾರ್ (23; 18ಎ) ಬಿಟ್ಟರೆ ಉಳಿದ ಬ್ಯಾಟರ್‌ಗಳು ಹೆಚ್ಚು ಪ್ರತಿರೋಧ ತೋರಲಿಲ್ಲ. 9 ಬ್ಯಾಟರ್‌ಗಳು ಎರಡಂಕಿ ಮುಟ್ಟಲೇ ಇಲ್ಲ.

ಗುರಿ ಬೆನ್ನಟ್ಟಿದ ಪಂಜಾಬ್ ತಂಡವು 12.1 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 98 ರನ್‌ ಗಳಿಸಿತು.   ಪಂಜಾಬ್‌ ತಂಡಕ್ಕೆ ಆತಿಥೇಯ ಬಳಗದ ವೇಗಿ ಹ್ಯಾಜಲ್‌ವುಡ್ (14ಕ್ಕೆ3) ಮತ್ತು ಭುವನೇಶ್ವರ್ ಕುಮಾರ್ (26ಕ್ಕೆ2) ಸವಾಲೊಡ್ಡಿದರು. ಆದರೆ, ನೆಹಲ್ ವಧೇರಾ (33; 19ಎ) ಅವರು ಅಬ್ಬರದ ಆಟದ ಮೂಲಕ ಪಂಜಾಬ್ ಗೆಲುವಿ ದಡ ಸೇರಿತು. ಆರ್‌ಸಿಬಿ ಭಾನುವಾರ ಇದೇ ತಂಡದ ವಿರುದ್ಧ ಪಂಜಾಬ್‌ನಲ್ಲಿ ಆಡಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments