Webdunia - Bharat's app for daily news and videos

Install App

IPL 2025: ಫೈನಲ್‌ನಲ್ಲಿ ಆರ್‌ಸಿಬಿಗೆ ಪಂಜಾಬ್‌ ಕಿಂಗ್ಸ್‌ ಎದುರಾಳಿ: ಶ್ರೇಯಸ್‌ ಆಟಕ್ಕೆ ಮುಂಬೈ ಇಂಡಿಯನ್ಸ್‌ ತತ್ತರ

Sampriya
ಸೋಮವಾರ, 2 ಜೂನ್ 2025 (01:56 IST)
Photo Courtesy X
ಅಹಮದಾಬಾದ್ : ನಾಯಕನಿಗೆ ತಕ್ಕ ಆಟವಾಡಿದ ಶ್ರೇಯಸ್‌ ಅಯ್ಯರ್‌ (ಔಟಾಗದೇ 87 ರನ್‌) ಅವರು ಪಂಜಾಬ್‌ ಕಿಂಗ್ಸ್‌ ತಂಡವು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಫೈನಲ್‌ಗೆ ಮುನ್ನಡೆಸಿದರು. ಎರಡನೇ ಕ್ವಾಲಿಫೈಯರ್‌ನಲ್ಲಿ ಐದು ವಿಕೆಟ್‌ಗಳಿಂದ ಸೋತ ಮುಂಬೈ ಇಂಡಿಯನ್ಸ್‌ ನಿರಾಸೆ ಅನುಭವಿಸಿತು.

ಅಹಮದಾಬಾದ್  ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ನೀಡಿದ್ದ 204 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿ 5 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಹಂತಕ್ಕೆ ಪ್ರವೇಶ ಪಡೆಯಿತು.

ಜೂನ್ 3ರಂದು ಇದೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 2025 ಫೈನಲ್ ಪಂದ್ಯ ನಡೆಯಲಿದ್ದು, ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆ ಪಂಜಾಬ್ ಕಿಂಗ್ಸ್ ಪ್ರಶಸ್ತಿಗಾಗಿ ಸೆಣಸಲಿದೆ. ಅಂದು ಯಾವುದೇ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದ್ದು, ಐಪಿಎಲ್ ಆರಂಭವಾದಾಗಿನಿಂದ ಅಂದರೆ 18 ವರ್ಷಗಳಿಂದ ಆರ್ ಸಿಬಿ ಮತ್ತು ಪಂಜಾಬ್ ಪ್ರಶಸ್ತಿಗೆ ಸೆಣಸುತ್ತಿವೆ.

204 ರನ್ ಗಳ ಗುರಿ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಗೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ಆಟಗಾರ ಪ್ರಭ್ ಸಿಮ್ರನ್ ಸಿಂಗ್ ಕೇವಲ 6 ರನ್ ಗಳಿಸಿ ಟ್ರೆಂಟ್ ಬೌಲ್ಟ್ ಬೌಲಿಂಗ್ ನಲ್ಲಿ ಔಟಾದರು. ಮತ್ತೊಂದು ತುದಿಯಲ್ಲಿದ್ದ ಪ್ರಿಯಾಂಶ್ ಆರ್ಯ ಕೂಡ 20 ರನ್ ಗಳಿಸಿ ಅಶ್ವನಿ ಕುಮಾರ್ ಬೌಲಿಂಗ್ ನಲ್ಲಿ ಔಟಾದರು.

ಇನ್ನು 3ನೇ ಕ್ರಮಾಂಕದಲ್ಲಿ ಬಂದ ಜಾಶ್ ಇಂಗ್ಲಿಸ್ 21 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 38 ರನ್ ಗಳಿಸಿ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ನೇಹಲ್ ವಧೇರಾ ಜೋಡಿ ಆಕರ್ಷಕ ಜೊತೆಯಾಟವಾಡಿದರು. ಆದರೆ ಈ ಹಂತದಲ್ಲಿ 29 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 48 ರನ್ ಗಳಿಸಿದ್ದ ನೇಹಲ್ ವಧೇರಾ ಅಶ್ವನಿ ಕುಮಾರ್ ಬೌಲಿಂಗ್ ನಲ್ಲಿ ಔಟಾದರು. ಆದರೆ, ಶ್ರೇಯಸ್‌ ಏಕಾಂಗಿಯಾಗಿ ನಿಂತು ತಂಡವನ್ನು ಗೆಲುವಿನ ದಡ ಸೇರಿಸಿದರು.

ಇನ್ನು ಮುಂಬೈ ಪರ ಟ್ರೆಂಟ್ ಬೌಲ್ಟ್ 1 ವಿಕೆಟ್ ಪಡೆದರೆ, ಅಶ್ವನಿ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯಾ ಕೂಡ ತಲಾ 1 ವಿಕೆಟ್ ಪಡೆದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments