Webdunia - Bharat's app for daily news and videos

Install App

IPL 2025: ತವರಿನಂಗಳದಲ್ಲಿ ಅಭಿಮಾನಿಗಳ ಮುಂದೆ ಮೊದಲ ಜಯ ದಾಖಲಿಸಿದ ಆರ್‌ಸಿಬಿ

Sampriya
ಗುರುವಾರ, 24 ಏಪ್ರಿಲ್ 2025 (23:50 IST)
Photo Courtesy X
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿನ ಚಿನ್ನಸ್ವಾಮಿ ಸ್ವೇಡಿಯಂನಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 11 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಇದು ಆರ್‌ಸಿನಿ ತಂಡಕ್ಕೆ ಈ ಆವೃತ್ತಿಯಲ್ಲಿ ತವರಿನಲ್ಲಿ ದೊರೆತ ಮೊದಲ ಜಯವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ್ದ 206 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 194 ಗಳಿಸಿ ಸೋಲು ಅನುಭವಿಸಿದೆ. ಜೋಶ್‌ ಹ್ಯಾಜಲ್‌ವುಡ್‌ ನಾಲ್ಕು ವಿಕೆಟ್‌ ಪಡೆದು ಗೆಲುವಿನ ರೂವಾರಿಯಾದರು.

ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ (70) ಹಾಗೂ ದೇವದತ್ತ ಪಡಿಕ್ಕಲ್ (50) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 205 ರನ್‌ಗಳ ಬೃಹತ್ ಮೊತ್ತ ಗಳಿಸಿತ್ತು.

‌ಈವರೆಗೆ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವುಗಳನ್ನು ದಾಖಲಿಸಿದೆ. ಮತ್ತೊಂದೆಡೆ ಒಂಬತ್ತು ಪಂದ್ಯಗಳಲ್ಲಿ ಎರಡು ಗೆಲುವು ಮಾತ್ರ ದಾಖಲಿಸಿದೆ.ರಾಹುಲ್‌ ದ್ರಾವಿಡ್‌ ಮಾರ್ಗದರ್ಶನದ ರಾಯಲ್ಸ್‌ ತಂಡಕ್ಕೆ ಇದು 9 ಪಂದ್ಯಗಳಲ್ಲಿ ಏಳನೇ ಸೋಲಾಗಿದೆ.

ತವರಿನಾಚೆ ಸತತ ಐದು ಪಂದ್ಯಗಳಲ್ಲಿ ಜಯ ಸಾಧಿಸಿರುವ ಆರ್‌ಸಿಬಿ, ತವರಿನ ಮೈದಾನದಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಅಲ್ಲದೆ ತವರಿನ ನೆಲದಲ್ಲಿ ಮೊದಲ ಗೆಲುವು ದಾಖಲಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs RR Match:ತವರಿನಲ್ಲಿ ಮೊದಲ ಬಾರಿ 200 ರನ್‌ಗಳ ಗಡಿ ದಾಟಿದ ಆರ್‌ಸಿಬಿ, ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

RCB vs RR Match: ತವರಿನಲ್ಲಿ ನಾಲ್ಕನೇ ಬಾರಿ ಟಾಸ್ ಸೋತ ಆರ್‌ಸಿಬಿ, ಫ್ಯಾನ್ಸ್‌ಗೆ ಮುಗಿಯದ ಟೆನ್ಷನ್

RCB vs RR Match: ಇಂದು ತವರಿನಲ್ಲಿ ಆರ್‌ಸಿಬಿ ಮ್ಯಾಜಿಕ್ ಮಾಡಿದ್ರೆ, ಮಹತ್ವದ ಬದಲಾವಣೆ ಫಿಕ್ಸ್‌

MI vs SRH Match:ಇಶಾನ್ ಕಿಶಾನ್ ಔಟ್ ಹಿಂದೆ ಮ್ಯಾಚ್‌ ಫಿಕ್ಸಿಂಗ್ ಆರೋಪ, ಈ ದೃಶ್ಯಗಳೇ ಸಾಕ್ಷಿ ಎಂದ ನೆಟ್ಟಿಗರು

Viral Video: ಪಹಲ್ಗಾಮ್ ಸಂತ್ರಸ್ತರಿಗೆ ಮೌನ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಪಾಂಡ್ಯದ್ದು ಇದೇನು ವರ್ತನೆ

ಮುಂದಿನ ಸುದ್ದಿ
Show comments