Webdunia - Bharat's app for daily news and videos

Install App

IPL 2025: ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ: ರಜತ್‌, ಜೋಶ್‌ ಆಗಮನದೊಂದಿಗೆ ಬೆಂಗಳೂರು ತಂಡಕ್ಕೆ ಆನೆಬಲ

Sampriya
ಗುರುವಾರ, 29 ಮೇ 2025 (19:12 IST)
Photo Courtesy X
ಚಂಡೀಗಢ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿಯ ಮೊದಲ ಕ್ವಾಲಿಫೈಯರ್‌ ಪಂದ್ಯ ಇಂದು ನಡೆಯಲಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್‌ ಪಾಟೀದಾರ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿರು. ಗಾಯಾಳಾಗಿದ್ದ ರಜತ್‌ ಚೇತರಿಸಿಕೊಂಡಿದ್ದು, ಪೂರ್ಣಕಾಲಿಕ ನಾಯಕರಾಗಿ ತಂಡಕ್ಕೆ ಮರಳಿದ್ದಾರೆ. ಹಿಂದಿನ ಪಂದ್ಯವನ್ನು ವಿಕೆಟ್‌ ಕೀಪರ್‌ ಜಿತೇಶ್‌ ಶರ್ಮಾ ತಂಡವನ್ನು ಮುನ್ನಡೆಸಿದ್ದರು. 

ಚೇಸಿಂಗ್‌ನಲ್ಲಿ ಉತ್ತಮವಾಗಿರುವ ಆರ್‌ಸಿಬಿಗೆ ಟಾಸ್ ಗೆಲುವು ಆರಂಭಿಕ ಗೆಲುವಾಗಿದೆ. ರಜತ್ ಪಾಟೀದಾರ್ ನಾಯಕನಾಗಿ ವಾಪಾಸ್ಸಾಗಿದ್ದಾರೆ. ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಜೋಶ್‌ ಹೇಜಲ್‌ವುಡ್ ಆಗಮನದಿಂದ ನುವಾನ್ ತುಷಾರ್ ಸ್ಥಾನ ಕಳೆದುಕೊಂಡಿದ್ದಾರೆ. ಪಂಜಾಬ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಮಾರ್ಕೋ ಬದಲು ಅಜ್ಮತುಲ್ಹಾ ತಂಡ ಸೇರಿಕೊಂಡಿದ್ದಾರೆ.

ಲೀಗ್‌ ಹಂತದ ಪಂದ್ಯಗಳು ಮುಕ್ತಯದ ಬಳಿಕ ಪಾಯಿಂಟ್‌ ಪಟ್ಟಿಯಲ್ಲಿ ಕ್ರಮವಾಗಿ ಅಗ್ರಸ್ಥಾನಗಳಲ್ಲಿ ಇರುವ ಪಂಜಾಬ್‌ ಕಿಂಗ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಚಂಡೀಗಢದ ಮುಲ್ಲನಪುರದಲ್ಲಿ ಮುಖಾಮುಖಿಗೆ ಸಜ್ಜಾಗಿವೆ. ಇಂದು ಜಯಿಸಿದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶವಿದೆ. 

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಗುಜರಾತ್‌ ಟೈಟನ್ಸ್‌, ಮುಂಬೈ ಇಂಡಿಯನ್ಸ್‌ ಶುಕ್ರವಾರ ಎಲಿಮಿನೇಟರ್‌ ಪಂದ್ಯ ಆಡಲಿವೆ. ಇದರಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡದೊಂದಿಗೆ ಭಾನುವಾರ ಎರಡನೇ ಕ್ವಾಲಿಫೈಯರ್‌ನಲ್ಲಿ ಎದುರಿಸಲಿದೆ. 


<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

ಮುಂದಿನ ಸುದ್ದಿ
Show comments