Webdunia - Bharat's app for daily news and videos

Install App

ನಾಲ್ಕನೇ ಬಾರಿ ಕೋಲ್ಕತ್ತ ನೈಟ್‌ ರೈಡರ್ಸ್‌ ಫೈನಲ್‌ಗೆ: ತಂಡದ ಯಶಸ್ಸಿನ ಹಿಂದಿದ್ದಾರೆ ಗೌತಿ

sampriya
ಬುಧವಾರ, 22 ಮೇ 2024 (17:04 IST)
Photo By X
ಕೋಲ್ಕತ್ತ: ಕೋಲ್ಕತ್ತ ನೈಟ್​ರೈಡರ್ಸ್ ತಂಡವು ಐಪಿಎಲ್‌ನ ಮೊದಲ ಕ್ವಾಲಿಫೈಯರ್‌ನಲ್ಲಿ​ ಗೆದ್ದು ನಾಲ್ಕನೇ ಬಾರಿ  ಫೈನಲ್​ ಪ್ರವೇಶಿಸಿದೆ. ಇತ್ತ ಕೋಲ್ಕತ ಫೈನಲ್​ ಪ್ರವೇಶಿಸುತ್ತಿದ್ದಂತೆ ಮೆಂಟರ್​ ಗೌತಮ್​ ಗಂಭೀರ್ ಮತ್ತು ನಾಯಕ ಶ್ರೇಯಸ್​ ಅಯ್ಯರ್​  ಅವರಿಗೆ ತಂಡದ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆಯಾಗುತ್ತಿದೆ.

ಭಾರತ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೋಲ್ಕತ್ತ ತಂಡದ ನಾಯಕರಾಗಿ ಎರಡು ಬಾರಿ ಟ್ರೋಫಿ ತಂದುಕೊಂಡಿದ್ದಾರೆ. ಪ್ರಸ್ತುತ ಅವರು ತಂಡದ ಮೆಂಟರ್‌ ಆಗಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ.

ಗೌತಿ ಕಳೆದ ವರ್ಷದವರೆಗೆ ಲಖನೌ ಸೂಪರ್‌ಜೈಂಟ್ಸ್‌ (ಎಲ್​ಎಸ್​ಜಿ) ತಂಡದ ಮೆಂಟರ್​ ಆಗಿದ್ದರು. ಈ ಬಾರಿ ಅವರು ಕೋಲ್ಕತ್ತ ನೈಟ್ ರೈಡರ್ಸ್‌ (ಕೆಕೆಆರ್​) ತಂಡಕ್ಕೆ ಶಿಫ್ಟ್ ಆಗಿದ್ದಾರೆ. ಕೆಕೆಆರ್​ನ ಹೊಸ ಮೆಂಟರ್ ಆಗಿ ಬಂದ ಬಳಿಕ ತಂಡದ ಸಂಯೋಜನೆಯನ್ನೇ ಗೌತಿ ಬದಲಾಯಿಸಿದರು. ಸುನಿಲ್ ನಾರಾಯಣ್ ಅವರನ್ನು ಆರಂಭಿಕರಾಗಿ ಕಳುಹಿಸುವುದು ಮತ್ತು ಸತತ ವೈಫಲ್ಯಗಳ ನಡುವೆಯೂ ಮಿಚೆಲ್ ಸ್ಟಾರ್ಕ್ ಅವರನ್ನು ಮುಂದುವರಿಸುವುದು ಮುಂತಾದ ಅವರ ನಿರ್ಧಾರಗಳಾಗಿವೆ.

ಗೌತಮ್​ ಗಂಭೀರ್​ ನಾಯಕತ್ವದಲ್ಲಿ ಕೆಕೆಆರ್​ 2012 ಹಾಗೂ 14ರಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಇದೀಗ ಮತ್ತೊಮ್ಮೆ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಈ ಬಾರಿಯೂ ತಂಡ ಚಾಂಪಿಯನ್​ ಪಟ್ಟ ಅಲಂಕರಿಸುತ್ತ ಎಂದು ಕಾದು ನೋಡಬೇಕಿದೆ.

ಇನ್ನೂ ಪಂದ್ಯ ಶುರುವಾಗುವುದಕ್ಕೂ ಮುನ್ನ ಗೌತಮ್​ ಗಂಭೀರ್​ ಹೇಳಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಗಂಭೀರ್​ ಆಡಿರುವ ಈ ಮಾತುಗಳೇ ಕೆಕೆಆರ್​ ಯಶಸ್ವಿಯಾಗಿ ಫೈನಲ್​ ಪ್ರವೇಶಿಸಲು ಸ್ಫೂರ್ತಿ ನೀಡಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೋದಲ್ಲಿ ಏನಿದೆ:  ಐಪಿಎಲ್​ನಲ್ಲಿ ನೀವು ಅತ್ಯಂತ ಯಶಸ್ವಿ ಫ್ರಾಂಚೈಸಿಯನ್ನು ಪ್ರತಿನಿಧಿಸುತ್ತಿದ್ದೀರಾ. ಟ್ರೋಫಿ ಗೆಲ್ಲುವುದು ನಮ್ಮ ಗುರಿಯಾಗಿದ್ದು, ಎಲ್ಲಾ ಆಟಗಾರರನ್ನು ಸಮಾನವಾಗಿ ನೋಡಲಾಗುವುದು. ನಾವು ಇಂದಿನಿಂದ ಅಭಿಯಾನವನ್ನು ಆರಂಭಿಸುತ್ತೇವೆ. ನೀವು ದೈಹಿಕವಾಗಿ, ಮಾನಸಿಕವಾಗಿ, ಬುದ್ಧಿವಂತಿಕೆಯಿಂದ ಸಾಧ್ಯವಿರುವ ಎಲ್ಲವನ್ನೂ ನೀಡಿ. ನೀವು ಒಂದು ಯಶಸ್ವಿ ಫ್ರಾಂಚೈಸ್​ಅನ್ನು ಪ್ರತಿನಿಧಿಸುತ್ತಿದ್ದೀರಾ. ನಾನು ಸಂಪೂರ್ಣವಾಗಿ ನಂಬುವ ಒಂದು ವಿಷಯವೆಂದರೆ ಆಟಗಾರರಿಗೆ ಸಂಪೂರ್ಣವಾಗಿ ಸ್ವಾತಂತ್ರ್ಯ ನೀಡುವುದು ಎಂದು ಗೌತಮ್​ ಗಂಭೀರ್​ ಹೇಳಿರುವ ವಿಡಿಯೋ ಟ್ರೆಂಡ್​ ಆಗಿದೆ.

ಕೋಲ್ಕತ ನೈಟ್​ರೈಡರ್ಸ್​ ತಂಡವು ಇದುವರೆಗೆ ನಾಲ್ಕು ಬಾರಿ ಫೈನಲ್​ ಪ್ರವೇಶಿಸಿದೆ. ಮೂರನೇ ಬಾರಿ ಟ್ರೋಫಿ ಗೆಲ್ಲುತ್ತಾ ಎಂಬ ಪ್ರಶ್ನೆಗೆ ಮೇ 26ರಂದು ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments