Webdunia - Bharat's app for daily news and videos

Install App

ಶಾರುಖ್ ವಾಂಖಡೆ ಪ್ರವೇಶ ನಿಷೇಧ ತೆರವು

Webdunia
ಭಾನುವಾರ, 2 ಆಗಸ್ಟ್ 2015 (15:55 IST)
ಬಾಲಿವುಡ್ ಬಾದಶಾ, ಕಿಂಗ್ ಖಾನ್ ಎಂದೇ ಪ್ರಸಿದ್ಧರಾಗಿರುವ ಶಾರುಖ್ ಖಾನ್ ಅವರಿಗೆ ಮುಂಬೈನ ವಾಂಖಡೆ ಕ್ರಿಕೆಟ್ ಸ್ಟೇಡಿಯಂ ಪ್ರವೇಶಿಸದಂತೆ ಹೇರಿದ್ದ ನಿಷೇಧವನ್ನು ಮುಂಬೈ ಕ್ರಿಕೆಟ್ ಸಂಸ್ಥೆ ತೆರವುಗೊಳಿಸಿದೆ.
ಎಂಸಿಎ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂಸಿಎ ಉಪಾಧ್ಯಕ್ಷ ಆಶೀಷ್‌ ಶೇಲಾರ್‌ ಸುದ್ದಿಗಾರರಿಗೆ ತಿಳಿಸಿದರು.
 
ಕೋಲ್ಕತ್ತ ನೈಟ್ ರೈಡರ್ಸ್‌ ಮಾಲೀಕ ಶಾರೂಕ್ ಖಾನ್‌ 2012 ರ ಮೇನಲ್ಲಿ ವಾಂಖಡೆ ಮೈದಾನದಲ್ಲಿ ಕೆಕೆಆರ್ ಹಾಗೂ ಮುಂಬೈ ಇಂಡಿಯನ್ಸ್‌ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಭದ್ರತಾ ಸಿಬ್ಬಂದಿ ಮತ್ತು ಎಂಸಿಎ ಅಧಿಕಾರಿಗಳ ಜತೆ ಅಸಭ್ಯವಾಗಿ ವರ್ತಿಸಿದ್ದರು. 
 
ತಮ್ಮ ತಂಡ ಗೆದ್ದ ಸಂತಷದಲ್ಲಿ ಮೈದಾನವನ್ನು ಪ್ರವೇಶಿಸಲು ಪ್ರಯತ್ನಿಸಿದ್ದ ಅವರನ್ನು ತಡೆದ ಭದ್ರತಾ ಅಧಿಕಾರಿಗಳ ಜತೆ ಅವರು ವಾಗ್ವಾದ ನಡೆಸಿದ್ದರು. ನಂತರ ಪರಷ್ಪರ ತಳ್ಳಾಟವೂ ನಡೆದಿತ್ತು. ಈ ಹಿನ್ನೆಲೆಯಲ್ಲಿ 5 ವರ್ಷ ವಾಂಖೆಡೆ ಮೈದಾನ ಪ್ರವೇಶಿಸದಂತೆ ಶಾರೂಕ್‌ ಮೇಲೆ ಎಂಸಿಎ ನಿಷೇಧ ಹೇರಿತ್ತು. ಹೀಗಾಗಿ 3 ವರ್ಷಗಳಿಂದ ಶಾರುಖ್ ವಾಂಖಡೆ ಮೈದಾನದಲ್ಲಿ ಪ್ರವೇಶಿಸಿರಲಿಲ್ಲ.  
 
ಆದರೆ 3 ವರ್ಷಕ್ಕೆ ಎಂಸಿಎ ಶಾರೂಕ್ ಮೇಲಿನ ನಿಷೇಧವನ್ನು ತೆಗೆದು ಹಾಕಿ ಕ್ರೀಡಾಂಗಣ ಪ್ರವೇಶಿಸುವುದಕ್ಕೆ ಅವಕಾಶ ನೀಡಿದೆ. ಶಾರುಖ್ ಅವರಿಗೆ ಕ್ರಿಕೆಟ್ ಮೇಲಿರುವ ಆಸಕ್ತಿ ಮತ್ತು ತಮ್ಮ ತಪ್ಪಿಗೆ ಅವರು ಬಹಿರಂಗ ಕ್ಷಮೆಯಾಚಿಸಿರುವುದನ್ನು ಪರಿಗಣಿಸಿ ಅವರ ಮೇಲಿನ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ಲಭಿಸಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments