Webdunia - Bharat's app for daily news and videos

Install App

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

Sampriya
ಭಾನುವಾರ, 20 ಏಪ್ರಿಲ್ 2025 (10:32 IST)
Photo Courtesy X
ಮುಲ್ಲನಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂದು ಮುಲ್ಲನಪುರದಲ್ಲಿ ಅದೇ ತಂಡದ ವಿರುದ್ಧ ಕಣಕ್ಕೆ ಇಳಿಯಲು ಸಜ್ಜಾಗಿದ್ದು, ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ಮೂರು ಪಂದ್ಯಗಳಲ್ಲಿಯೂ ಸೋತು ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದೆ. ಆದರೆ ತವರಿನಾಚೆಯ ನಡೆದ ಎಲ್ಲ ನಾಲ್ಕು ಪಂದ್ಯಗಳಲ್ಲಿಯೂ ಜಯಭೇರಿ ಬಾರಿಸಿದೆ. ಹೀಗಾಗಿ, ಇಂದಿನ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದಲ್ಲಿದೆ.

ಚಿನ್ನಸ್ವಾಮಿಯಲ್ಲಿ ಪಂಜಾಬ್‌ ಕಿಂಗ್ಸ್ ತಂಡವು ಆರ್‌ಸಿಬಿಯನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಮಳೆಯಿಂದಾಗಿ ಸುಮಾರು 2 ಗಂಟೆಗೂ ಹೆಚ್ಚು ವಿಳಂಬವಾಗಿ ಆರಂಭವಾದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್ ವಿಭಾಗ ಕುಸಿದಿತ್ತು. 14 ಓವರ್‌ಗಳಿಗೆ (ಇನಿಂಗ್ಸ್‌ವೊಂದಕ್ಕೆ) ನಿಗದಿಯಾಗಿದ್ದ ಪಂದ್ಯದಲ್ಲಿ ಆರ್‌ಸಿಬಿ 9 ವಿಕೆಟ್‌ಗಳಿಗೆ 95 ರನ್‌ ಗಳಿಸಿತ್ತು. ಶ್ರೇಯಸ್ ಅಯ್ಯರ್ ಬಳಗವು 12.1 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 98 ರನ್‌ ಗಳಿಸಿ ಜಯಿಸಿತ್ತು.

ಒಟ್ಟು ಏಳು ಪಂದ್ಯಗಳನ್ನು ಆಡಿರುವ ಬೆಂಗಳೂರು ತಂಡವು ನಾಲ್ಕರಲ್ಲಿ ಗೆದ್ದ, ಮೂರರಲ್ಲಿ ಸೋಲು ಎಂಟು ಅಂಕಗಳೊಂದಿಗೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪಂಜಾಬ್‌ ತಂಡವು ಅಷ್ಟೇ ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.



 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments