ಐಪಿಎಲ್: ಕೇರಳದ ಹುಡುಗನ ಸಾಹಸಕ್ಕೆ ಬೆಚ್ಚಿಬಿದ್ದ ವಿರಾಟ್ ಕೊಹ್ಲಿ ಹುಡುಗರು

Webdunia
ಸೋಮವಾರ, 16 ಏಪ್ರಿಲ್ 2018 (08:36 IST)
ಬೆಂಗಳೂರು: ಮೊನ್ನೆಯ ಗೆಲುವಿನ ಸವಿಗನಸಲ್ಲಿ ಚಿನ್ನಸ್ವಾಮಿ ಅಂಗಣಕ್ಕೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಇಂದು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕೇರಳದ ಹುಡುಗ ಸಂಜು ಸ್ಯಾಮ್ಸನ್ ಶಾಕ್ ಕೊಟ್ಟರು.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಗೆ ಆರಂಭ ಸಾಧಾರಣವಾಗಿತ್ತು. ಆದರೆ ಆರಂಭಿಕ ಡಿ ಶಾರ್ಟ್ ಔಟಾಗುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದು ಬಂದ ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಮೈಮೇಲೆ ಭೂತ ಹೊಕ್ಕಿದವರಂತೆ ಬ್ಯಾಟ್ ಬೀಸಿದರು.

ಕೇವಲ 45 ಎಸೆತಗಳಲ್ಲಿ 10 ಸಿಕ್ಸರ್ ಗಳೊಂದಿಗೆ 92 ರನ್ ಸಿಡಿಸಿದರು. ಅವರ ಅಬ್ಬರದ ಬ್ಯಾಟಿಂಗ್ ಗೆ ಚಿನ್ನಸ್ವಾಮಿ ಅಂಗಣ ಕುಣಿದಾಡಿ ಬಿಟ್ಟಿತು. ಕೊನೆಯಲ್ಲಿ 217 ರನ್ ಪೇರಿಸಿದಾಗ ಚೇಸಿಂಗ್ ವೀರ ಕೊಹ್ಲಿ ಅದನ್ನು ಯಶಸ್ವಿಯಾಗಿ ಬೆನ್ನಟ್ಟುವರು ಎಂಬುದೇ ಆರ್ ಸಿಬಿ ಅಭಿಮಾನಿಗಳ ನಿರೀಕ್ಷೆಯಾಗಿತ್ತು.

ಆದರೆ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ 57 ರನ್ ಸಿಡಿಸಿ ಆಸೆ ಚಿಗುರಿಸಿ ಔಟಾದರು. ಮನ್ ದೀಪ್ ಸಿಂಗ್ 25 ಎಸೆತಗಳಲ್ಲಿ 47 ರನ್ ಗಳಿಸಿ ಭರವಸೆ ಹುಟ್ಟಿಸಿದರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ 19 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದಾಗ ಆರ್ ಸಿಬಿ ಗೆಲುವಿನ ಆಸೆ ಕಮರಿ ಹೋಯ್ತು. ಹಾಗಿದ್ದರೂ ದಿಟ್ಟ ಪ್ರತಿರೋಧವನ್ನೇ ತೋರಿದ ಆರ್ ಸಿಬಿ 6 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಇದರೊಂದಿಗೆ ಈ ಆವೃತ್ತಿಯ ಎರಡನೇ ಸೋಲುಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿ: ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ

ಮದುವೆ ಬ್ರೇಕಪ್ ಬಳಿಕ ಸ್ಮೃತಿ ಮಂಧಾನ ವರ್ತನೆಯೇ ಬದಲಾಯ್ತು Video

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments