Select Your Language

Notifications

webdunia
webdunia
webdunia
webdunia

ಶಂಕರ ಬಟ್ ಕನ್ನಡ ನುಡಿಯರಿಮೆ: ಸಂಶೋಧನೆ ಮಾಡ್ತೀರಾ?

ಶಂಕರ ಬಟ್ ಕನ್ನಡ ನುಡಿಯರಿಮೆ: ಸಂಶೋಧನೆ ಮಾಡ್ತೀರಾ?
ಬನವಾಸಿ ಬಳಗವು ಕನ್ನಡ ನುಡಿಯರಿಮೆ ವಲಯದಲ್ಲಿ ಹೆಚ್ಚಿನ ಸಂಶೋಧನೆಗೆ ಒತ್ತು ನೀಡುತ್ತಾ ಡಾ. ಡಿ. ಎನ್. ಶಂಕರಬಟ್ಟರ ಮುಂದಾಳ್ತನದಲ್ಲಿ ಒಂದು ವರ್ಷದ ತರಬೇತಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

ಈ ಶಿಬಿರವು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಶುರುವಾಗಲಿದ್ದು, ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ನಾಲ್ಕು ಶಿಬಿರಗಳು ನಡೆಯಲಿವೆ. ಪ್ರತೀ ಶಿಬಿರದಲ್ಲೂ ಮೂರು ದಿನಗಳ ತರಬೇತಿ ಇರುತ್ತದೆ.

ಇದರಲ್ಲಿ ನುಡಿಯರಿಮೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ, ನುಡಿಯರಿಮೆಯ ಅಧ್ಯಯನ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರನ್ನು ಸಂದರ್ಶಿಸಿ ತರಬೇತಿ ಶಿಬಿರಕ್ಕೆ ಸೇರಿಸಿಕೊಳ್ಳಲಾಗುತ್ತದೆ.

ನುಡಿಯರಿಮೆಯ ಕ್ಷೇತ್ರದಲ್ಲಿ, ಡಾII ಡಿ. ಎನ್. ಶಂಕರ ಬಟ್ ಅವರ ಮುಂದಾಳ್ತನದಲ್ಲಿ ಸಂಶೋಧನೆಗಳನ್ನು ಮಾಡ ಬಯಸುವವರು ವಿವರಗಳನ್ನು priyank @ banavasibalaga.org ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ಈ ಬಾರಿಯ ತರಬೇತಿ ಶಿಬಿರವು ಬೆಂಗಳೂರಿನಿಂದಾಚೆ ನಡೆಯಲಿದ್ದು ಬನವಾಸಿ ಬಳಗವೇ ಉಳಿದುಕೊಳ್ಳುವ, ಊಟ ತಿಂಡಿಯ ಏರ್ಪಾಟು ಮಾಡಲಿದೆ.

Share this Story:

Follow Webdunia kannada