Webdunia - Bharat's app for daily news and videos

Install App

77ನೇ ಸಾಹಿತ್ಯ ತೇರಿನಲ್ಲಿ ಭೋಜನದ ಅವ್ಯವಸ್ಥೆಗೆ ಆಕ್ರೋಶ

Webdunia
ಶುಕ್ರವಾರ, 4 ಫೆಬ್ರವರಿ 2011 (17:32 IST)
77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವುದು ಒಂದು ಕಡೆಯಾದರೆ, ಊಟದ ವ್ಯವಸ್ಥೆ ಇನ್ನೊಂದು ಕಡೆ. ಏತನ್ಮಧ್ಯೆ ಸಮ್ಮೇಳನಕ್ಕೆ ನಿರೀಕ್ಷೆ ಮೀರಿ ಜನರು ಆಗಮಿಸಿದ ಹಿನ್ನೆಲೆಯಲ್ಲಿ ಊಟೋಪಚಾರದಲ್ಲಿ ಸಾಕಷ್ಟು ಅವ್ಯವಸ್ಥೆ ಉಂಟಾಗುವ ಮೂಲಕ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಅಲ್ಲದೇ ರಾಜ್ಯದ ವಿವಿಧ ಪ್ರದೇಶಗಳಿಂದ ಬಂದ ಪ್ರತಿನಿಧಿಗಳಿಗೆ ವಸತಿ ವ್ಯವಸ್ಥೆ ಒಂದೆಡೆಯಾದರೆ, ಉಪಹಾರ ಮತ್ತು ಭೋಜನಕ್ಕೆ ಮತ್ತೊಂದೆಡೆ ವ್ಯವಸ್ಥೆ ಮಾಡಿರುವುದು ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿತ್ತು. ಬಹುತೇಕ ಎಲ್ಲ ಸಮ್ಮೇಳನಗಳಲ್ಲಿಯೂ ಉಪಹಾರ ಮತ್ತು ಭೋಜನದ ವ್ಯವಸ್ಥೆ ಸಮ್ಮೇಳನ ನಡೆಯುವ ಸ್ಥಳದಲ್ಲೇ ಮಾಡುವುದು ವಾಡಿಕೆ. ಆದರೆ ನಗರದಲ್ಲಿ ನಡೆದಿರುವ ಸಮ್ಮೇಳನದ ಸ್ಥಳದಿಂದ ಸುಮಾರು ಒಂದೂವರೆ ಕಿಲೋ ಮೀಟರ್‌ನಷ್ಟು ದೂರವಿರುವ ಹಳೆಕೋಟೆ ಮೈದಾನ, ಉದಯಭಾನು ಕಲಾ ಸಂಘದ ಆಟದ ಮೈದಾನ, ಮಹಿಳಾ ಸಮಾಜದಲ್ಲಿ ಏರ್ಪಡಿಸಿರುವುದು ವಯೋವೃದ್ಧರು, ಮಹಿಳೆಯರು ಆಕ್ರೋಶಕ್ಕೆ ಕಾರಣವಾಯಿತು.

ಉದಯಭಾನು ಕಲಾ ಸಂಘದ ಆಟದ ಮೈದಾನದಲ್ಲಿ ಸುಮಾರು 25 ಸಾವಿರ ಮಂದಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಜನರು ಅದಕ್ಕಿಂತ ದುಪ್ಪಟ್ಟಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಸರಿಯಾದ ಊಟೋಪಚಾರದ ಇಲ್ಲದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು. ಹೆಚ್ಚುವರಿ ಜನ ಆಗಮಿಸಿದರೆ ಬದಲಿ ವ್ಯವಸ್ಥೆ ಮಾಡಿಕೊಳ್ಳದಿರುವುದು ಈ ಸಮಸ್ಯೆಗೆ ಕಾರಣ ಎಂದು ಸಾಹಿತ್ಯಾಸಕ್ತರು ದೂರಿದ್ದಾರೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments