ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದ ಸಮಿತಿಯ ಸಂಸದರು ದೇಶದಲ್ಲಿ ಸ್ಥಾಪಿಸಲಾಗುತ್ತಿರುವ ವಿಶೇಷ ಆರ್ಥಿಕ ವಲಯಗಳ ಪ್ರದೇಶಗಳನ್ನು ಭೇಟಿ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಸಂಸತ್ ಸದಸ್ಯ ಶಾಂತಾರಾಂ ನಾಯ್ಕ್ ತಿಳಿಸಿದ್ದಾರೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಕಮಲನಾಥ್ ಅವರೊಂದಿಗೆ ನಡೆದ ಸಮಿತಿಯ ಸಭೆಯ ನಂತರ ಭೇಟಿಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು ಆದರೆ ಭೇಟಿ ದಿನಾಂಕ ನಿಗದಿಪಡಿಸಿಲ್ಲ ಎಂದು ನಾಯ್ಕ್ ತಿಳಿಸಿದ್ದಾರೆ.
ವಿಶೇಷ ಆರ್ಥಿಕ ವಲಯಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೇಯಲ್ಲಿ ರೈತರಿಗೆ ಸೂಕ್ತ ಪರಿಹಾರ ದೊರೆತಿಲ್ಲ ಹಾಗೂ ವಿಶೇಷ ಆರ್ಥಿಕ ವಲಯಗಳಲ್ಲಿ ಸ್ಥಳಿಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಸಮಿತಿ ಭೇಟಿ ಮಾಡಲು ನಿಶ್ಚಯಿಸಿದೆ ಎಂದು ಸಂಸದ ನಾಯ್ಕ ತಿಳಿಸಿದ್ದಾರೆ.