Webdunia - Bharat's app for daily news and videos

Install App

ಶೀಘ್ರದಲ್ಲಿ ಕಠಿಣ ಆರ್ಥಿಕ ನೀತಿ ಜಾರಿ: ಪ್ರಣಬ್ ಮುಖರ್ಜಿ

Webdunia
ಮಂಗಳವಾರ, 27 ಮಾರ್ಚ್ 2012 (13:03 IST)
PTI
ಮುಂಬರುವ ದಿನಗಳಲ್ಲಿ ಸರ್ಕಾರ, ಇನ್ನಷ್ಟು ಕಠಿಣವಾದ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.

ಸದ್ಯ ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 125 ಡಾಲರ್ ದಾಟಿದೆ. ಇದರಿಂದ ದೇಶದ ವಿತ್ತೀಯ ಕೊರತೆ ಅಂತರ ಹೆಚ್ಚಲಿದೆ. ಸದ್ಯ ಪರಿಸ್ಥಿತಿಯಲ್ಲಿ ಹೂಡಿಕೆದಾರರ ಆತ್ಮವಿಶ್ವಾಸ ಮರಳುವಂತೆ ಮಾಡಲು ಸರ್ಕಾರ ಬಿಗಿ ಆರ್ಥಿಕ ನೀತಿಗಳನ್ನು ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಅವರು ಶನಿವಾರ ಇಲ್ಲಿ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಆಯೋಜಿಸಿದ್ದ ಬಜೆಟ್ ನಂತರದ ಸಭೆಯಲ್ಲಿ ಅಭಿಪ್ರಾಯಪಟ್ಟರು.

ಆರ್ಥಿಕ ಪುನಶ್ಚೇತನಕ್ಕೆ ಬಜೆಟ್ ಒಂದೇ ಪರಿಹಾರವಲ್ಲ. ವಾಸ್ತವ ಪರಿಸ್ಥಿತಿಗೆ ಹತ್ತಿರವಾದ ಕೆಲವು ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಒಟ್ಟಾರೆ ಹಣದುಬ್ಬರ ದರ ತಗ್ಗಿದರೂ, ಚಿಲ್ಲರೆ ಹಣದುಬ್ಬರ ಹೆಚ್ಚಿದೆ. ಹೊಸ ಹೂಡಿಕೆಗಳ ಕೊರತೆಯಿಂದಾಗಿ ಕೈಗಾರಿಕೆ ಮತ್ತು ತಯಾರಿಕೆ ವಲಯದ ಪ್ರಗತಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಆದರೂ, ಮುಂಬರುವ ದಿನಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಲ್ಪಾವಧಿ ಬಡ್ಡಿ ದರಗಳನ್ನು ತಗ್ಗಿಸುವ ವಿಶ್ವಾಸ ಇದೆ ಎಂದರು.

ಕಳೆದ ಮೂರು ತಿಂಗಳಿಂದ ಸಗಟು ಹಣದುಬ್ಬರ ದರ ಇಳಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಪ್ರಕಟಿಸಲಿರುವ ಮಧ್ಯಂತರ ಹಣಕಾಸು ಪರಾಮರ್ಶೆಯು ಹೂಡಿಕೆದಾರರ ಪರವಾಗಿ ಇರುತ್ತದೆ ಎನ್ನುವ ಭರವಸೆ ಇದೆ ಎಂದು ಪ್ರಣವ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments