ಸಿಮೆಂಟ್ ಉತ್ಪಾದನಾ ವಲಯಕ್ಕೆ ಅದಾನಿ ಎಂಟ್ರಿ

Webdunia
ಸೋಮವಾರ, 16 ಮೇ 2022 (08:23 IST)
ಮುಂಬೈ: ಭಾರತದ ಎಸಿಸಿ ಮತ್ತು ಅಂಬೂಜಾ ಸಿಮೆಂಟ್ಸ್‌ ಕಂಪನಿಯಲ್ಲಿ ಸ್ವಿಜರ್ಲೆಂಡ್‌ ಮೂಲದ ಹೋಲ್‌ಸಿಮ್ಸ್‌ ಕಂಪನಿ ಹೊಂದಿದ್ದ ಪೂರ್ಣ ಪಾಲನ್ನು ಅದಾನಿ ಸಮೂಹ 10.5 ಶತಕೋಟಿ ಡಾಲರ್‌ (ಅಂದಾಜು 78000 ಕೋಟಿ ರು.)ಗೆ ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. 
 
ಹಾಲಿ ಅಂಬೂಜಾ ಸಿಮೆಂಟ್ಸ್‌ನಲ್ಲಿ ಶೇ.63.19 ಮತ್ತು ಎಸಿಸಿಯಲ್ಲಿ ಶೆ.54.53ರಷ್ಟುಪಾಲನ್ನು ಹೋಲ್‌ಸಿಮ್ಸ್‌ ಕಂಪನಿ ಹೊಂದಿತ್ತು. ಈ ಖರೀದಿಯೊಂದಿಗೆ ಅದಾನಿ ಕಂಪನಿ ಸಿಮೆಂಟ್‌ ಉತ್ಪಾದನಾ ವಲಯ ಪ್ರವೇಶ ಮಾಡಿದ್ದೂ, ಅಲ್ಲದೆ ಒಂದೇ ಬಾರಿಗೆ ದೇಶದ 2ನೇ ಅತಿದೊಡ್ಡ ಸಿಮೆಂಟ್‌ ಉತ್ಪಾದನಾ ಕಂಪನಿಯಾಗಿ ಹೊರಹೊಮ್ಮಲಿದೆ.
 
ಜೂನ್‌ 10ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಯಲ್ಲಿ ವಿಶ್ವದ 5ನೇ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಅಥವಾ ಅವರ ಪತ್ನಿ ಡಾ ಪ್ರೀತಿ ಅದಾನಿ ಅವರಿಗೆ ಟಿಕೆಟ್‌ ನೀಡಲು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
 
ರಾಜ್ಯದಲ್ಲಿ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನಸಭೆಯ ಸಂಖ್ಯಾಬಲ ಗಮನಿಸಿದರೆ ಎಲ್ಲ ನಾಲ್ಕೂ ಸ್ಥಾನ ಜಗನ್‌ರ ವೈಎಸ್ಸಾರ್‌ ಕಾಂಗ್ರೆಸ್‌ ಪಾಲಾಗಲಿವೆ. ಮೂಲಗಳ ಪ್ರಕಾರ ಅಮಿತ್‌ ಶಾ ಅವರು ಅದಾನಿ ಕುಟುಂಬದ ಹೆಸರು ಪ್ರಸ್ತಾಪಿಸಿದ್ದು, ಇದಕ್ಕೆ ಜಗನ್‌ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ. ವೈಎಸ್ಸಾರ್‌ ಕಾಂಗ್ರೆಸ್‌ ಈ ಹಿಂದೆ ರಿಲಯನ್ಸ್‌ ಗ್ರೂಪ್‌ ಹಿರಿಯ ಅಧ್ಯಕ್ಷ ಪರಿಮಳ್‌ ನಾಥ್ವಾನಿ ಅವರನ್ನು ರಾಜ್ಯಸಭೆಗೆ ಕಳಿಸಿತ್ತು.
 
ಅದಾನಿ ಸಮೂಹಗಳ ಮುಖ್ಯಸ್ಥ ಗೌತಮ್‌ ಅದಾನಿ, ಇದೀಗ ವಿಶ್ವದ 5ನೇ ಅತಿ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ಇದುವರೆಗೂ 5ನೇ ಸ್ಥಾನದಲ್ಲಿದ್ದ ಹೂಡಿಕೆದಾರ ವಾರನ್‌ ಬಫೆಟ್‌ ಅವರನ್ನು ಅದಾನಿ 6ನೇ ಸ್ಥಾನಕ್ಕೆ ತಳ್ಳಿದ್ದಾರೆ. 
 
ಈ ತಿಂಗಳ ಮೊದಲ ವಾರದಲ್ಲಷ್ಟೇ ಏಷ್ಯಾದ ನಂ.1 ಶ್ರೀಮಂತರಾಗಿ ಹೊರಹೊಮ್ಮಿದ್ದ ಗೌತಮ್‌ ಅದಾನಿ ಒಡೆತನದ ಕಂಪನಿಗಳ ಷೇರು ಮೌಲ್ಯ ಭಾರೀ ಕಂಡ ಹಿನ್ನೆಲೆಯಲ್ಲಿ, ಹಾಲಿ ಅದಾನಿ ಅವರ ಆಸ್ತಿ 9.27 ಲಕ್ಷ ಕೋಟಿ ರು.ಗೆ ಏರಿದೆ ಎಂದು ಫೋಬ್ಸ್‌ ಮ್ಯಾಗಜಿನ್‌ನ ರಿಯಲ್‌ ಟೈಮ್‌ ಬಿಲಿಯನೇರ್‌ ಪಟ್ಟಿಹೇಳಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments