Webdunia - Bharat's app for daily news and videos

Install App

ನೀವು ಎಸ್‌ಬಿಐ ಬ್ಯಾಂಕ್ ಗ್ರಾಹಕರೆ? ಹಾಗಾದ್ರೆ ಮಾಸಿಕ 15000 ರೂ ಆದಾಯ ಗಳಿಸಿ

Webdunia
ಗುರುವಾರ, 16 ನವೆಂಬರ್ 2017 (16:04 IST)
ನೀವು ಎಸ್‌ಬಿಐ ಬ್ಯಾಂಕ್ ಗ್ರಾಹಕರೆ ಹಾಗಾದ್ರೆ ಮಾಸಿಕ 15000 ರೂ ಆದಾಯ ಗಳಿಸಬಹುದು. ನಂಬಲು ಸಾಧ್ಯವಾಗುತ್ತಿಲ್ಲವೇ? ದೇಶದಲ್ಲಿಯೇ ಅತಿ ದೊಡ್ಡ ಬ್ಯಾಂಕ್ ಎನ್ನುವ ಎಸ್‌ಬಿಐ ಖಾತೆದಾರರಿಗೆ ಚಿನ್ನದ ಅವಕಾಶ ನೀಡಿದೆ.
 
ಬ್ಯಾಂಕ್ ತನ್ನ ಯೋಜನಾ ಅಡಿಯಲ್ಲಿ ಖಾತೆದಾರರು ಬ್ಯಾಂಕನೊಂದಿಗೆ ಕೂಡಿ ಕೆಲಸ ಮಾಡುವ ಮೂಲಕ ತಿಂಗಳಿಗೆ 15000 ರೂಪಾಯಿಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.
 
ಎಸ್‌ಬಿಐ ಬ್ಯಾಂಕ್ ಯೂಥ್ ಫೆಲೋಶಿಪ್ ಯೋಜನೆಯ ಪ್ರಕಾರ ಖಾತೆದಾರನು ಬ್ಯಾಂಕ್‌ನಲ್ಲಿ 13 ತಿಂಗಳುಗಳ ಕಾಲ ಕಾರ್ಯನಿರ್ವಹಿಸಬೇಕಾಗುತ್ತದೆ. ಯೂಥ್ ಫೆಲೋಶಿಪ್ ಅಡಿಯಲ್ಲಿ ನೀವು ಹಳ್ಳಿಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅಲ್ಲಿನ ಗ್ರಾಮಸ್ಥರಿಗೆ ಮತ್ತು ಮಕ್ಕಳಿಗೆ ಶಿಕ್ಷಣ ನೀಡಬೇಕಾಗುತ್ತದೆ. ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಾಗುತ್ತದೆ. 
 
ಹಳ್ಳಿಗಳಲ್ಲಿ ಶಿಕ್ಷಣ ನೀಡಲು ಅಗತ್ಯವಾಗುವ ಎಲ್ಲಾ ಸೌಲಭ್ಯಗಳನ್ನು ಬ್ಯಾಂಕ್ ಒದಗಿಸುತ್ತದೆ.ಗ್ರಾಮಗಳಿಗೆ ತೆರಳಿ ಮಕ್ಕಳು, ಯುವಕರು ಪ್ರತಿಯೊಬ್ಬರಿಗೆ ಶಿಕ್ಷಣದ ಮಹತ್ವ ಸಾರುವುದಲ್ಲದೇ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಮನವರಿಕೆ ಮಾಡಿಕೊಳ್ಳಬೇಕು.
 
ಗ್ರಾಮಗಳಲ್ಲಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ಬಗ್ಗೆ ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ತರೇಬೇತಿ ನೀಡುತ್ತಾರೆ. ಪದವೀಧರರು ಮತ್ತು ಯುವ ವೃತ್ತಿಪರರು ಎನ್‌ಜಿಓ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ. ಇದಕ್ಕೆ ಬ್ಯಾಂಕ್ ಮಾಸಿಕ 15 ಸಾವಿರ ರೂ ವೇತನ ನೀಡುತ್ತದೆ.
 
ಗ್ರಾಮಗಳಿಗೆ ಭೇಟಿ, ಆಹಾರ, ಭೋಜನಕ್ಕಾಗಿ ತಗಲುವ ವೆಚ್ಚವನ್ನು ಬ್ಯಾಂಕ್ ಪ್ರತ್ಯೇಕವಾಗಿ ನೀಡಲಿದೆ. ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಳಿಸಿದ ನಂತರ ಬ್ಯಾಂಕ್ 30 ಸಾವಿರ ಮರುಪಾವತಿ ಮೊತ್ತವನ್ನು ಪಡೆಯಬಹುದಾಗಿದೆ.ಹೆಚ್ಚಿನ ವಿವರಗಳಿಗಾಗಿ ಹತ್ತಿರದ ಎಸ್‌ಬಿಐ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments