Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ಬಂಪರ್, ಕಾಳುಮೆಣಸಿಗೆ ಮತ್ತೆ ನಿರಾಸೆ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Krishnaveni K
ಗುರುವಾರ, 10 ಏಪ್ರಿಲ್ 2025 (11:37 IST)
ಬೆಂಗಳೂರು: ನಿನ್ನೆ ಯಥಾಸ್ಥಿತಿಯಲ್ಲಿದ್ದ ಅಡಿಕೆ ಬೆಲೆ ಇಂದು ಏರಿಕೆಯಾಗಿದ್ದು ಬೆಳೆಗಾರರಿಗೆ ಬಂಪರ್ ಸಿಕ್ಕಂತಾಗಿದೆ.  ಆದರೆ ಕಾಳುಮೆಣಸು ಬೆಳೆಗಾರರಿಗೆ ನಿರಾಸೆಯಾಗಲಿದೆ. ಯಾಕೆಂದರೆ ಕಾಳುಮೆಣಸು ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದೆ. ಮೊನ್ನೆ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳೆಗಾರರ ಮೊಗದಲ್ಲಿ ಹರ್ಷ ತಂದಿತ್ತು. ನಿನ್ನೆ ಏರಿಕೆಯಾಗದೇ ಇದ್ದರೂ ಇಳಿಕೆಯಾಗಿರಲಿಲ್ಲ. ಆದರೆ ಇಂದು ಮತ್ತೆ ಅಡಿಕೆ ಬೆಲೆ ಕೊಂಚ ಏರಿಕೆಯಾಗಿದೆ. ನಿನ್ನೆ ಹೊಸ ಅಡಿಕೆ ಬೆಲೆ ಗರಿಷ್ಠ 440 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 485 ರೂ.ಗಳಷ್ಟಿತ್ತು. ಇಂದೂ ಕೂಡಾ ಅದೇ ದರ ಮುಂದುವರಿದಿದೆ. ಡಬಲ್ ಚೋಲ್ ಅಡಿಕೆ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ.

ಹೊಸ ಫಟೋರ ದರದಲ್ಲೂ ಯಾವುದೇ ವ್ಯತ್ಯಾಸವಿಲ್ಲ, 320 ರೂ.ಗಳಷ್ಟೇ ಇದೆ. ಹಳೆ ಫಟೋರ ದರ 340 ರೂ. ಗಳಲ್ಲೇ ಇದೆ. ಹೊಸ ಉಳ್ಳಿ ದರ  ಏರಿಕೆಯಾಗಿ ಗರಿಷ್ಠ 200 ರೂ., ಹಳೆ ಉಳ್ಳಿ ದರವೂ 215 ಕ್ಕೆ ಏರಿಕೆಯಾಗಿದೆ. ಹೊಸ ಕೋಕ ದರವೂ 10 ರೂ. ಏರಿಕೆಯಾಗಿದ್ದು 280 ರೂ., ಹಳೇ ಕೋಕ 10 ರೂ. ಏರಿಕೆಯಾಗಿ 290 ರೂ. ಗೆ ತಲುಪಿದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಮತ್ತೆ ನಿರಾಸೆಯಾಗಲಿದೆ. ಸತತ ಎರಡು ದಿನ ಏರಿಕೆಯಾಗಿತ್ತು. ಆದರೆ ಈಗ ಸತತ ಮೂರನೇ ದಿನವೂ ಇಳಿಕೆಯಾಗಿದೆ. ಮೊನ್ನೆ ಕಾಳುಮೆಣಸು ದರ 15 ರೂ. ಇಳಿಕೆಯಾಗಿದ್ದು ಇಂದು ಗರಿಷ್ಠ 695 ರೂ.ಗಳಷ್ಟಾಗಿತ್ತು. ನಿನ್ನೆ ಮತ್ತೆ 5 ರೂ. ಇಳಿಕೆಯಾಗಿದ್ದು 690 ಕ್ಕೆ ಬಂದಿತ್ತು. ಇಂದು ಮತ್ತೆ 5 ರೂ. ಇಳಿಕೆಯಾಗಿ 685 ರೂ.ಗೆ ಬಂದು ತಲುಪಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments