Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ, ಕಾಳುಮೆಣಸಿಗೆ ಮತ್ತೆ ಇಳಿಕೆ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Krishnaveni K
ಬುಧವಾರ, 9 ಏಪ್ರಿಲ್ 2025 (11:01 IST)
ಬೆಂಗಳೂರು: ನಿನ್ನೆ ಭಾರೀ ಏರಿಕೆ ಕಂಡಿದ್ದರಿಂದ ಅಡಿಕೆ ಬೆಳೆಗಾರರಿಗೆ ಈಗ ನೆಮ್ಮದಿ. ಇಂದೂ ಯಥಾಸ್ಥಿತಿ ಮುಂದುವರಿದಿದೆ. ಆದರೆ ಕಾಳುಮೆಣಸು ಬೆಳೆಗಾರರಿಗೆ ನಿರಾಸೆಯಾಗಲಿದೆ. ಯಾಕೆಂದರೆ ಕಾಳುಮೆಣಸು ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ನಿನ್ನೆ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳೆಗಾರರ ಮೊಗದಲ್ಲಿ ಹರ್ಷ ತಂದಿತ್ತು. ಇಂದು ಮತ್ತೆ ಅಡಿಕೆ ಬೆಲೆ ಹೆಚ್ಚೂ ಇಲ್ಲ, ಕಡಿಮೆಯೂ ಆಗಿಲ್ಲ ಎನ್ನುವ ಸ್ಥಿತಿಯಾಗಿದೆ.  ನಿನ್ನೆ ಹೊಸ ಅಡಿಕೆ ಬೆಲೆ ಗರಿಷ್ಠ 475 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 485 ರೂ.ಗಳಷ್ಟಿತ್ತು. ಇಂದೂ ಕೂಡಾ ಅದೇ ದರ ಮುಂದುವರಿದಿದೆ. ಡಬಲ್ ಚೋಲ್ ಅಡಿಕೆ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ.

ಹೊಸ ಫಟೋರ ದರದಲ್ಲೂ ಯಾವುದೇ ವ್ಯತ್ಯಾಸವಿಲ್ಲ, 320 ರೂ.ಗಳಷ್ಟೇ ಇದೆ. ಹಳೆ ಫಟೋರ ದರ 340 ರೂ. ಗಳಲ್ಲೇ ಇದೆ. ಹೊಸ ಉಳ್ಳಿ ದರ  ರೂ. ಏರಿಕೆಯಾಗಿ ಗರಿಷ್ಠ 185 ರೂ., ಹಳೆ ಉಳ್ಳಿ ದರವೂ 200 ರೂ. ಗಳಷ್ಟೇ ಇದೆ. ಹೊಸ ಕೋಕ 270 ರೂ., ಹಳೇ ಕೋಕ 280 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಇಂದು ಕೊಂಚ ನಿರಾಸೆಯಾಗಲಿದೆ. ಸತತ ಎರಡು ದಿನ ಏರಿಕೆಯಾಗಿತ್ತು. ಆದರೆ ಈಗ ಸತತ ಎರಡನೇ ದಿನವೂ ಇಳಿಕೆಯಾಗಿದೆ. ನಿನ್ನೆ ಕಾಳುಮೆಣಸು ದರ 15 ರೂ. ಇಳಿಕೆಯಾಗಿದ್ದು ಇಂದು ಗರಿಷ್ಠ 695 ರೂ.ಗಳಷ್ಟಾಗಿತ್ತು. ಇಂದು ಮತ್ತೆ 5 ರೂ. ಇಳಿಕೆಯಾಗಿದ್ದು 690 ಕ್ಕೆ ಇಳಿಕೆಯಾಗಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments