Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 13 ಮೇ 2025 (11:39 IST)
ಬೆಂಗಳೂರು: ಬೆಲೆ ಏರಿಕೆಯ ನಿರೀಕ್ಷೆಯಲ್ಲಿರುವ ಅಡಿಕೆ ಬೆಳೆಗಾರರಿಗೆ ನಿರಾಸೆಯಾಗಿದೆ. ಇಂದು ಅಡಿಕೆ ಬೆಲೆ ಕೊಂಚ ಇಳಿಕೆಯಾಗಿದ್ದು ಬೆಳೆಗಾರರಿಗೆ ಹೊಡೆತ ನೀಡಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಹೊಸ ಅಡಿಕೆ, ಹಳೆ ಅಡಿಕೆ ಬೆಲೆ ಯಥಾ ಸ್ಥಿತಿಯಲ್ಲಿತ್ತು. ಏರಿಕೆಯಾಗದಿದ್ದರೂ ಇಳಿಕೆಯಾಗಿಲ್ಲ ಎಂಬ ನೆಮ್ಮದಿಯಿತ್ತು. ಆದರೆ ಇಂದು ಹಳೆ ಅಡಿಕೆ ಮತ್ತು ಡಬಲ್ ಚೋಲ್ ಅಡಿಕೆ ಬೆಲೆ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟೇ ಇದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ. ಗಳಿಂದ 490 ರೂ.ಗೆ ಇಳಿಕೆಯಾಗಿದೆ. ಇಂದು ಡಬಲ್ ಚೋಲ್ ಬೆಲೆ ಭಾರೀ ಇಳಿಕೆಯಾಗಿದ್ದು ಗರಿಷ್ಠ 510 ರೂ.ಗಳಿದ್ದಿದ್ದು 490 ರೂ.ಗೆ ತಲುಪಿದೆ.

ಉಳಿದಂತೆ ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಹೊಸ ಫಟೋರ ದರ ಇಂದು 360 ರೂ.ಗಳಷ್ಟಿದೆ. ಹಳೆ ಫಟೋರ ದರ 370 ರೂ. ಗಳಷ್ಟಾಗಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ ಯಥಾಸ್ಥಿತಿಯ್ಲಿದ್ದು 300 ರೂ.ಆಗಿದೆ. ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು.  ಇಂದು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದ್ದು 650 ರೂ.ಗಳಷ್ಟೇ ಇದೆ. ಇನ್ನು ಒಣಕೊಬ್ಬರಿ ಬಹಳ ದಿನಗಳ ನಂತರ ಏರಿಕೆಯಾಗಿದ್ದು ಗರಿಷ್ಠ 180 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊರನಾಡು ಬಳಿಕ ಮಂತ್ರಾಲಯದಿಂದ ದೇಶ ರಕ್ಷಣೆಗೆ ಲಕ್ಷ ಲಕ್ಷ ದೇಣಿಗೆ

ಬ್ರಹ್ಮೋಸ್ ಕ್ರೆಡಿಟ್ ನಮ್ಮದು ಎಂದ ಕಾಂಗ್ರೆಸ್: ಮುಂಬೈ ಉಗ್ರ ದಾಳಿಯಾದಾಗ ಆಯುಧ ಪೂಜೆಗಿಡಲಾಗಿತ್ತಾ ಎಂದ ನೆಟ್ಟಿಗರು

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

India Pakistan ಕದನ ವಿರಾಮವಾದರೂ ಮತ್ತೆ ಕಾಪಾಡಿ ಎಂದು ಅಮೆರಿಕಾಗೆ ಮೊರೆಯಿಟ್ಟಿದ್ದೇಕೆ ಪಾಕಿಸ್ತಾನ

ಕದನವಿರಾಮ ತೀರ್ಮಾನ ಟ್ರಂಪ್ ತೆಗೆದುಕೊಳ್ಳುತ್ತಿರುವುದು ನಮಗೆ ಅವಮಾನ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments