Webdunia - Bharat's app for daily news and videos

Install App

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Krishnaveni K
ಸೋಮವಾರ, 19 ಮೇ 2025 (12:50 IST)
ಬೆಂಗಳೂರು: ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ಅಡಿಕೆ ಬೆಳೆಗಾರರಿಗೆ ಇದೀಗ ನಿರಾಸೆಯಾಗಿದೆ. ವಾರದ ಮೊದಲ ದಿನವೇ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಯಾವುದೇ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ ಎನ್ನುವ ಪರಿಸ್ಥಿತಿಯಾಗಿದೆ. ಇಂದು ಎಲ್ಲಾ ವರ್ಗದ ಅಡಿಕೆ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ಇದೀಗ ಯಾವುದೇ ವರ್ಗದ ಅಡಿಕೆ ಬೆಲೆಯೂ ಏರಿಕೆಯಾಗಿಲ್ಲ. ಹಾಗಂತ ಇಳಿಕೆಯಾಗಿಲ್ಲ ಎನ್ನುವುದೊಂದೇ ಸಮಾಧಾನಕರ ವಿಷಯ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟೇ ಇದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 490 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 490 ರೂ.ಗಳಷ್ಟೇ ಇದೆ.

ಉಳಿದಂತೆ ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲೂ ವ್ಯತ್ಯಾಸವಾಗಿಲ್ಲ. ಹೊಸ ಫಟೋರ ದರ 370 ರೂ.ಗಳಷ್ಟಿದೆ. ಹಳೆ ಫಟೋರ ದರ 375 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ 305 ರೂ.ಆಗಿದೆ. ಹಳೇ ಕೋಕ ದರವೂ 305 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು.  ಮೊನ್ನೆ ಕಾಳುಮೆಣಸು ದರ 20 ರೂ. ಏರಿಕೆಯಾಗಿತ್ತು. ಆದರೆ ಇಂದು ಕಾಳುಮೆಣಸು ದರವೂ ಯಥಾಸ್ಥಿತಿಯಲ್ಲಿದ್ದು 670 ರೂ.ಗಳಷ್ಟೇ ಇದೆ. ಇನ್ನು ಒಣಕೊಬ್ಬರಿ ಗರಿಷ್ಠ 182 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ದೊಡ್ಡಣ್ಣನ ಸುಂಕಾಸ್ತ್ರಕ್ಕೆ ಭಾರತ ತಿರುಗೇಟು: ಚೀನಾದೊಂದಿಗೆ ಕೈಕುಲುಕಲು ಸಜ್ಜಾದ ಪ್ರಧಾನಿ ಮೋದಿ

Karnataka WEATHER:ಕರಾವಳಿಯಲ್ಲಿ ಇನ್ನೂ ಒಂದು ವಾರ ಭಾರಿ ಮಳೆ, ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ಮುಂದಿನ ಸುದ್ದಿ
Show comments