Webdunia - Bharat's app for daily news and videos

Install App

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Krishnaveni K
ಶುಕ್ರವಾರ, 6 ಜೂನ್ 2025 (12:21 IST)
ಬೆಂಗಳೂರು: ಅಡಿಕೆ ಬೆಳೆಗಾರರು ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದರೆ ನಿರಾಸೆಯಾಗಲಿದೆ. ಇಂದೂ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ಕೆಲವು ದಿನಗಳಿಂದ ಅದೇ ಬೆಲೆ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆ ಏರಿಕೆಯಾಗುತ್ತಿರುವುದು ಬೆಳೆಗಾರರಿಗೆ ಖುಷಿ ಮೂಡಿಸಿತ್ತು. ಆದರೆ ಕಳೆದ ಒಂದು ವಾರದಿಂದ ಈಗ ಅಡಿಕೆ ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಾಗಿದೆ. ಇಂದು ವಾರದ ಆರಂಭದಲ್ಲೂ ಅದೇ ಬೆಲೆ ಮುಂದುವರಿದಿದೆ. ಇಂದು ಹೊಸ ಅಡಿಕೆ ಬೆಲೆ 495 ರೂ.ಗಳಷ್ಟೇ ಇದೆ.  ಹಳೆ ಅಡಿಕೆ ಬೆಲೆ ಯೂ ಮೊನ್ನೆಯಷ್ಟೇ ಅಂದರೆ ಗರಿಷ್ಠ 520 ರೂ.ಗಳಷ್ಟಿದೆ.  ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಫಟೋರ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 370 ರೂ.ಗಳಷ್ಟಿದೆ. ಹಳೆ ಫಟೋರ ದರ 375 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 260 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ ತಲಾ 315 ರೂ.ಆಗಿದೆ.
ಕಾಳುಮೆಣಸು ದರ
ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಕಾಳುಮೆಣಸು ಬೆಳೆಗಾರರಿಗೆ ಮತ್ತೆ ನಿರಾಸೆಯಾಗಿದೆ. ಕಾಳುಮೆಣಸು ದರವೂ ಯಾವುದೇ ಏರಿಕೆ ಅಥವಾ ಇಳಿಕೆಯಾಗಿಲ್ಲ. ಇಂದು ಗರಿಷ್ಠ ದರ 650 ರೂ.ಗಳಾಗಿದೆ. ಇನ್ನು ಒಣಕೊಬ್ಬರಿ ಬೆಲೆ ಮಾತ್ರ ಕೆಲವು ದಿನಗಳ ನಂತರ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು ಗರಿಷ್ಠ 200 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments