Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Krishnaveni K
ಗುರುವಾರ, 12 ಜೂನ್ 2025 (12:12 IST)
ಬೆಂಗಳೂರು: ಅಡಿಕೆ ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ರೈತರಿಗೆ ಕಳೆದ ನಾಲ್ಕೈದು ದಿನಗಳಿಂದ ಶುಭ ಸುದ್ದಿಯೇನೂ ಬರುತ್ತಿಲ್ಲ. ಮೊನ್ನೆ ಸಾಕಷ್ಟು ಇಳಿಕೆ ಕಂಡಿದ್ದ  ಅಡಿಕೆ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಈ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗುತ್ತಾ ಬಂದಿದೆ. ಹೀಗಾಗಿ ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇಂದೂ ಬೆಲೆ ಏರಿಕೆಯಾಗಿಲ್ಲ. ಬದಲಿಗೆ  ಯಥಾಸ್ಥಿತಿಯಲ್ಲಿದೆ. ನಿನ್ನೆ ಹೊಸ ಅಡಿಕೆ ಬೆಲೆ  475 ರೂ.ಗಳಾಗಿತ್ತು. ಇಂದೂ ಅದೇ ಬೆಲೆ ಮುಂದುವರಿದಿದೆ.  ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ನಿನ್ನೆಯದ್ದೇ ಬೆಲೆಯಿದೆ.. ಇಂದು ಹೊಸ ಪಟೋರ  ದರ 365 ರೂ.ಗಳಷ್ಟಿದೆ. ಹಳೆ ಫಟೋರ ದರ 365 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 255 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲಿ ಮಾತ್ರ 5 ರೂ. ಇಳಿಕೆಯಾಗಿದ್ದು ಇಂದು. ಇಂದೂ ತಲಾ 310 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಇಂದು ಮತ್ತೆ 5 ರೂ. ಕುಸಿತವಾಗಿದೆ. ಇಂದು 655 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ನಿನ್ನೆ ಏರಿಕೆಯಾಗಿ ಬರೋಬ್ಬರಿ 255 ರೂ. ಗೆ ತಲುಪಿತ್ತು. ಇಂದೂ ಅದೇ ಬೆಲೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments