Webdunia - Bharat's app for daily news and videos

Install App

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Krishnaveni K
ಮಂಗಳವಾರ, 17 ಜೂನ್ 2025 (11:50 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ರೈತರಿಗೆ ನಿರಾಸೆಯಾಗಿದೆ. ಬೆಲೆ ಆರಕ್ಕೂ ಏರುತ್ತಿಲ್ಲ, ಮೂರಕ್ಕೂ ಇಳಿಯುತ್ತಿಲ್ಲ ಎಂಬ ಸ್ಥಿತಿಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
 

ಕಳೆದ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿತ್ತು. ಇದಾದ ಬಳಿಕ ಬೆಲೆ ಏರಿಕೆಯೂ ಆಗಿಲ್ಲ, ಇಳಿಕೆಯೂ ಆಗಿಲ್ಲ. ಅಡಿಕೆ ಬೆಲೆ ಯಥಾಸ್ಥಿತಿಯಲ್ಲೇ ಮುಂದುವರಿದಿದೆ. ಈ ವಾರದ ಆರಂಭದಿಂದಲೂ ಅದೇ ಪರಿಸ್ಥಿತಿಯಿದೆ. ಅಡಿಕೆ ಬೆಲೆಯಲ್ಲಿ ಇಂದೂ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ  475 ರೂ.ಗಳಷ್ಟೇ ಇದೆ. ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ ಮತ್ತು ಹಳೆ ಪಟೋರ ದರದಲ್ಲಿ ಕೊಂಚ ಇಳಿಕೆಯಾಗಿದೆ. ನಿನ್ನೆ ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 360 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 255 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿಲ್ಲ. ಇಂದೂ ತಲಾ 310 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಇಂದು ಮತ್ತೆ 5 ರೂ. ಕುಸಿತವಾಗಿದೆ. ಇಂದು 645 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ಕಳೆದ ವಾರ ಏರಿಕೆಯಾಗಿತ್ತು. ಆದರೆ ಈಗ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ  235 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments