Webdunia - Bharat's app for daily news and videos

Install App

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Krishnaveni K
ಶುಕ್ರವಾರ, 20 ಜೂನ್ 2025 (11:41 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ರೈತರಿಗೆ ನಿರಾಸೆಯಾಗಿದೆ. ಇಂದೂ ಕೂಡಾ ಅಡಿಕೆ ಬೆಲೆಯಲ್ಲಿ ಹೆಚ್ಚೇನೂ ಆಗಿಲ್ಲ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿತ್ತು. ಇದಾದ ಬಳಿಕ ಬೆಲೆ ಏರಿಕೆಯೂ ಆಗಿಲ್ಲ, ಇಳಿಕೆಯೂ ಆಗಿಲ್ಲ. ಅಡಿಕೆ ಬೆಲೆ ಯಥಾಸ್ಥಿತಿಯಲ್ಲೇ ಮುಂದುವರಿದಿತ್ತು. ಈ ವಾರದ ಆರಂಭದಿಂದಲೂ ಅದೇ ಪರಿಸ್ಥಿತಿಯಿದೆ. ಹೊಸ ಅಡಿಕೆ ಬೆಲೆ  475 ರೂ.ಗಳಷ್ಟೇ ಇದೆ. ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 365 ರೂ.ಗಳಷ್ಟಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಆದರೆ ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 10 ರೂ.ಗಳಷ್ಟು ಇಳಿಕೆಯಾಗಿದ್ದು 240 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿರಲಿಲ್ಲ.ಆದರೆ ಇಂದು ತಲಾ 5 ರೂ. ಇಳಿಕೆಯಾಗಿದ್ದು ತಲಾ 305 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಯಥಾಸ್ಥಿತಿಯಲ್ಲಿದ್ದು 640 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ಕಳೆದ ವಾರ ಏರಿಕೆಯಾಗಿತ್ತು. ಈಗಲೂ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ  235 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments