Webdunia - Bharat's app for daily news and videos

Install App

Arecanut price: ಅಡಿಕೆ, ತೆಂಗು ಬೆಳೆಗಾರರಿಗೆ ಇಂದು ನಿಜಕ್ಕೂ ಬಂಪರ್ ಸುದ್ದಿ

Krishnaveni K
ಬುಧವಾರ, 25 ಜೂನ್ 2025 (11:45 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆಯಾಗದೇ ರೈತರು ನಿರಾಶರಾಗಿದ್ದರು. ಆದರೆ ಇಂದು ಕೆಲವು ವರ್ಗದ ಅಡಿಕೆ ಬೆಲೆ ಏರಿಕೆಯಾಗಿದ್ದು ಬೆಳೆಗಾರರಿಗೆ ಬಂಪರ್ ಆಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿತ್ತು. ಒಂದೆಡೆ ಬೆಳೆ ಕಡಿಮೆ. ಇನ್ನೊಂದೆಡೆ ಬೆಲೆಯೂ ಏರಿಕೆಯಾಗದೇ ರೈತರು ಕಂಗಾಲಾಗಿದ್ದರು. ಆದರೆ ಇಂದು ಅಡಿಕೆ ಬೆಲೆ ಹೆಚ್ಚಳವಾಗಿದ್ದು ಕೊಂಚ ಸಮಾಧಾನಪಡುವಂತಾಗಿದೆ. ಹೊಸ ಅಡಿಕೆ ಬೆಲೆ ನಿನ್ನೆ  475 ರೂ.ಗಳಷ್ಟಿತ್ತು. ಇಂದು 10 ರೂ. ಏರಿಕೆಯಾಗಿದ್ದು 485 ರೂ.ಗೆ ಬಂದು ತಲುಪಿದೆ. ಹಳೆ ಅಡಿಕೆ ಬೆಲೆ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 365 ರೂ.ಗಳಷ್ಟಿತ್ತು. ಇಂದು ಇವೆರಡರ ಬೆಲೆ ತಲಾ 5 ರೂ.ಗಳಷ್ಟು ಏರಿಕೆಯಾಗಿ 370 ರೂ.ಗಳಾಗಿವೆ.  ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಇಂದೂ ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ಈಗ 240 ರೂ.ಗಳಷ್ಟೇ ಇದೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿರಲಿಲ್ಲ.ಆದರೆ ಇಂದು ತಲಾ 5 ರೂ. ಇಳಿಕೆಯಾಗಿದ್ದು ತಲಾ 305 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಇಂದು ಕಾಳುಮೆಣಸು ದರದಲ್ಲೂ ಬರೋಬ್ಬರಿ 10 ರೂ.ಗಳಷ್ಟು ಏರಿಕೆಯಾಗಿದ್ದು 650 ರೂ.ಗಳಷ್ಟಿವೆ. ಕೆಲವು ದಿನಗಳ ನಂತರ ಇಂದು ಒಣಕೊಬ್ಬರಿ ಬೆಲೆಯೂ ಏರಿಕೆಯಾಗಿದ್ದು ಗರಿಷ್ಠ 250 ರೂ.ಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments