Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Krishnaveni K
ಗುರುವಾರ, 26 ಜೂನ್ 2025 (11:12 IST)
ಬೆಂಗಳೂರು: ಹಲವು ದಿನಗಳ ನಂತರ ನಿನ್ನೆ ಅಡಿಕೆ ಬೆಲೆ ಏರಿಕೆಯಾಗಿ ರೈತರ ಮೊಗದಲ್ಲಿ ಸಂತಸ ಮೂಡಿತ್ತು. ಆದರೆ ಇಂದು ಮತ್ತೆ ಅಡಿಕೆ ಬೆಲೆ ಏರಿಕೆಯೂ ಆಗದೇ ಇಳಿಕೆಯೂ ಆಗದ ಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಒಂದೆಡೆ ಬೆಳೆ ಕಡಿಮೆ. ಇನ್ನೊಂದೆಡೆ ಬೆಲೆಯೂ ಏರಿಕೆಯಾಗದೇ ರೈತರು ಕಂಗಾಲಾಗಿದ್ದರು. ಆದರೆ ನಿನ್ನೆ ಅಡಿಕೆ ಬೆಲೆ ಹೆಚ್ಚಳವಾಗಿದ್ದು ಕೊಂಚ ಸಮಾಧಾನಪಡುವಂತಾಗಿತ್ತು. ಆದರೆ ಇಂದು ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ನಿನ್ನೆ  485 ರೂ.ಗಳಷ್ಟಿತ್ತು. ಇಂದೂ ಬೆಲೆ ಅಷ್ಟೇ ಇದೆ. ಹಳೆ ಅಡಿಕೆ ಬೆಲೆ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 365 ರೂ.ಗಳಷ್ಟಿತ್ತು. ನಿನ್ನೆ ಇವೆರಡರ ಬೆಲೆ ತಲಾ 5 ರೂ.ಗಳಷ್ಟು ಏರಿಕೆಯಾಗಿ 370 ರೂ.ಗಳಾಗಿತ್ತು. ಇಂದೂ ಅದೇ ಬೆಲೆಯಿದೆ.  ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಇಂದೂ ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ಈಗ 240 ರೂ.ಗಳಷ್ಟೇ ಇದೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿಲ್ಲ. ಇದು ತಲಾ 305 ರೂ.ಆಗಿದೆ.
ಕಾಳುಮೆಣಸು ದರ
ಕಾಳುಮೆಣಸು ದರದಲ್ಲೂ ಬಹಳ ದಿನಗಳ ನಂತರ ಕೊಂಚ ಏರಿಕೆಯಾಗಿತ್ತು. ಇಂದು ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 650 ರೂ.ಗಳಷ್ಟಿವೆ. ನಿನ್ನೆ ಭರ್ಜರಿ ಏರಿಕೆ ಕಂಡು 250 ರೂ. ತಲುಪಿದ್ದ ಒಣ ಕೊಬ್ಬರಿ ಬೆಲೆಯೂ ಇಂದು ಅದೇ ಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments