Webdunia - Bharat's app for daily news and videos

Install App

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Krishnaveni K
ಮಂಗಳವಾರ, 1 ಜುಲೈ 2025 (11:12 IST)
ಬೆಂಗಳೂರು: ಈ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿದ್ದು ರೈತರು ನಿರಾಸೆ ಪಡುವಂತಾಗಿದೆ. ಆದರೆ ಕೊಬ್ಬರಿ ಬೆಳೆಗಾರರಿಗೆ ಇಂದು ಬಂಪರ್ ಬೆಲೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಮೊನ್ನೆಯಷ್ಟೇ ಏರಿಕೆಯಾಗಿದ್ದ ಅಡಿಕೆ ಬೆಲೆ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ವಾರದ ಆರಂಭದಲ್ಲೇ ಇಳಿಕೆಯಾಗಿದ್ದು ರೈತರಿಗೆ ನಿರಾಸೆಯಾಗಿದೆ. ಹೊಸ ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ  485 ರೂ.ಗಳಷ್ಟಿತ್ತು. ಇಂದೂ ಬೆಲೆ ಅಷ್ಟೇ ಇದೆ. ಹಳೆ ಅಡಿಕೆ ಬೆಲೆ ಏರಿಕೆ-ಇಳಿಕೆಯಾಗದೇ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 365 ರೂ.ಗಳಷ್ಟಿತ್ತು. ವಾರಂತ್ಯದಲ್ಲಿ ಇವೆರಡರ ಬೆಲೆ ತಲಾ 5 ರೂ.ಗಳಷ್ಟು ಏರಿಕೆಯಾಗಿ 370 ರೂ.ಗಳಾಗಿತ್ತು. ಇಂದೂ ಅದೇ ಬೆಲೆಯಿದೆ.  ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಆದರೆ ನಿನ್ನೆ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 10 ರೂ.ಗಳಷ್ಟು ಇಳಿಕೆಯಾಗಿ 230 ರೂ.ಗಳಷ್ಟೇ ಇದೆ. ಇಂದೂ ಅದೇ ಬೆಲೆಯಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಭಾರೀ ಇಳಿಕೆಯಾಗಿದೆ. ಇಂದು ಮತ್ತೆ 5 ರೂ. ಇಳಿಕೆಯಾಗಿದ್ದು ಇವೆರಡರ ದರ ಈಗ 285 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ದರದಲ್ಲೂ ಬಹಳ ದಿನಗಳ ನಂತರ ಕೊಂಚ ಏರಿಕೆಯಾಗಿತ್ತು. ಇಂದು ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 650 ರೂ.ಗಳಷ್ಟಿವೆ. ಆದರೆ ಕೊಬ್ಬರಿ ಬೆಳೆಗಾರರಿಗೆ ಮಾತ್ರ ಬಂಪರ್. ನಿನ್ನೆ ಮತ್ತೊಮ್ಮೆ ಬೆಲೆ 5 ರೂ.ಗಳಷ್ಟು ಏರಿಕೆ ಕಂಡಿದೆ. ಒಣ ಕೊಬ್ಬರಿ ಬೆಲೆ ಇಂದೂ 275 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ಮುಂದಿನ ಸುದ್ದಿ
Show comments