Webdunia - Bharat's app for daily news and videos

Install App

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

Krishnaveni K
ಶುಕ್ರವಾರ, 4 ಜುಲೈ 2025 (11:32 IST)
ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಯಾಕೋ ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಆದರೆ ಕಾಳು ಮೆಣಸು ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ. ಕೊಬ್ಬರಿ ಬೆಲೆ ಮತ್ತೆ ಇಳಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ವಾರದ ಆರಂಭದಲ್ಲೇ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಈಗ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 370 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇವೆರಡರ ಬೆಲೆಯೂ ಅದೇ ಸ್ಥಿತಿಯಲ್ಲಿದೆ.  ಹೊಸ ಉಳ್ಳಿ ದರದಲ್ಲೂ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 230 ರೂ.ಗಳಾಗಿದೆ. ಮೊನ್ನೆಯಷ್ಟೇ ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಭಾರೀ ಇಳಿಕೆಯಾಗಿದೆ. ಆದರೆ ಇದೀಗ ಕೆಲವು ದಿನಗಳಿಂದ ಅದೂ ಯಥಾಸ್ಥಿತಿಯಲ್ಲಿದೆ. ಇವೆರಡರ ದರ ಈಗ 285 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಆದರೆ ಕೊಬ್ಬರಿ ಮತ್ತು ಕಾಳುಮೆಣಸು ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ. ಕಾಳುಮೆಣಸು ದರದಲ್ಲೂ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು. 5 ರೂ. ಏರಿಕೆಯಾಗಿದ್ದು 655 ರೂ.ಗಳಷ್ಟಿವೆ. ಏರುಗತಿಯಲ್ಲಿದ್ದ ಕೊಬ್ಬರಿ ಬೆಲೆ ಇಂದು ದಿಡೀರ್ 15 ರೂ. ಇಳಿಕೆಯಾಗಿದೆ.  ಒಣ ಕೊಬ್ಬರಿ ಬೆಲೆ ಇಂದು 260 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

ಮುಂದಿನ ಸುದ್ದಿ
Show comments