Webdunia - Bharat's app for daily news and videos

Install App

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Krishnaveni K
ಮಂಗಳವಾರ, 15 ಜುಲೈ 2025 (14:33 IST)
ಬೆಂಗಳೂರು: ಅಡಿಕೆ ಬೆಳೆಗಾರರಿಗೆ ವಾರದ ಆರಂಭದಲ್ಲೂ ನಿರಾಸೆಯಾಗಿದೆ. ಇಂದೂ ಅಡಿಕೆ ಬೆಲೆಯಲ್ಲಿ ಯಥಾಸ್ಥಿತಿಯಿದೆ. ಇನ್ನು, ಕಾಳುಮೆಣಸು ಬೆಳೆಗಾರರಿಗೂ ನಿರಾಸೆಯಾಗಿದ್ದು ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬಂತಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ನಿಂತ ನೀರಾಗಿದೆ. ಬೆಲೆ ಏರಿಕೆಯ ಲಕ್ಷಣವಂತೂ ಕಂಡುಬರುತ್ತಿಲ್ಲ. ಇದು ರೈತರ ಚಿಂತೆಗೆ ಕಾರಣವಾಗಿದೆ.  ಈ ವಾರವಾದರೂ ಅಡಿಕೆ ಬೆಲೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 365 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಳೆದ ವಾರಂತ್ಯಕ್ಕೆ ಕಾಳುಮೆಣಸು ಬೆಲೆಯಲ್ಲಿ ಇಳಿಕೆಯಾಗಿತ್ತು.  ಇಂದು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದ್ದು 645 ರೂ.ಗಳಷ್ಟಿವೆ. ಒಣ ಕೊಬ್ಬರಿ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 275 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ಮುಂದಿನ ಸುದ್ದಿ
Show comments