Webdunia - Bharat's app for daily news and videos

Install App

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K
ಮಂಗಳವಾರ, 12 ಆಗಸ್ಟ್ 2025 (11:50 IST)
ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಇಂದೂ ನಿರಾಸೆಯಾಗಿದ್ದು ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅತ್ತ ಕಾಳುಮೆಣಸು ಯಥಾಸ್ಥಿತಿಯಲ್ಲಿದ್ದರೆ, ಕೊಬ್ಬರಿ ಬೆಲೆ ಕೊಂಚ ಇಳಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂಬಂತಾಗಿತ್ತು. ವಿಪರೀತ ಮಳೆಯಿಂದ ಕೊಳೆ ರೋಗದ ನಡುವೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲಿ ಮೊನ್ನೆ 5 ರೂ. ಏರಿಕೆಯಾಗಿತ್ತು. ಈಗ ಯಥಾಸ್ಥಿತಿಯಲ್ಲಿದ್ದು ಇಂದು ದರ 280 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ ಯಥಾಸ್ಥಿತಿಯಲ್ಲಿದ್ದು  660 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಕೊಂಚ ಇಳಿಕೆಯಾಗಿದ್ದು 220 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments