Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Krishnaveni K
ಸೋಮವಾರ, 30 ಜೂನ್ 2025 (11:16 IST)
ಬೆಂಗಳೂರು: ಕಳೆದ ವಾರದ ಆರಂಭದಲ್ಲೇ ಅಡಿಕೆ ಬೆಲೆ ಏರಿಕೆಯಾಗಿ ರೈತರಿಗೆ ಖುಷಿಯಾಗಿತ್ತು. ಆದರೆ ಈ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿದ್ದು ರೈತರು ನಿರಾಸೆ ಪಡುವಂತಾಗಿದೆ. ಆದರೆ ಕೊಬ್ಬರಿ ಬೆಳೆಗಾರರಿಗೆ ಇಂದು ಬಂಪರ್ ಬೆಲೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಮೊನ್ನೆಯಷ್ಟೇ ಏರಿಕೆಯಾಗಿದ್ದ ಅಡಿಕೆ ಬೆಲೆ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ವಾರದ ಆರಂಭದಲ್ಲೇ ಏರಿಕೆ ಬಿಡಿ ಇಳಿಕೆಯಾಗಿದ್ದು ರೈತರಿಗೆ ನಿರಾಸೆಯಾಗಿದೆ. ಹೊಸ ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ  485 ರೂ.ಗಳಷ್ಟಿತ್ತು. ಇಂದೂ ಬೆಲೆ ಅಷ್ಟೇ ಇದೆ. ಹಳೆ ಅಡಿಕೆ ಬೆಲೆ ಏರಿಕೆ-ಇಳಿಕೆಯಾಗದೇ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 365 ರೂ.ಗಳಷ್ಟಿತ್ತು. ವಾರಂತ್ಯದಲ್ಲಿ ಇವೆರಡರ ಬೆಲೆ ತಲಾ 5 ರೂ.ಗಳಷ್ಟು ಏರಿಕೆಯಾಗಿ 370 ರೂ.ಗಳಾಗಿತ್ತು. ಇಂದೂ ಅದೇ ಬೆಲೆಯಿದೆ.  ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಆದರೆ ಇಂದು ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 10 ರೂ.ಗಳಷ್ಟು ಇಳಿಕೆಯಾಗಿ 230 ರೂ.ಗಳಷ್ಟೇ ಇದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಭಾರೀ ಇಳಿಕೆಯಾಗಿದೆ. ತಲಾ 305 ರೂ.ಆಗಿದ್ದ ಇವೆರಡರ ದರ ಈಗ 290 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ದರದಲ್ಲೂ ಬಹಳ ದಿನಗಳ ನಂತರ ಕೊಂಚ ಏರಿಕೆಯಾಗಿತ್ತು. ಇಂದು ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 650 ರೂ.ಗಳಷ್ಟಿವೆ. ಆದರೆ ಕೊಬ್ಬರಿ ಬೆಳೆಗಾರರಿಗೆ ಮಾತ್ರ ಬಂಪರ್. ಇಂದು ಮತ್ತೊಮ್ಮೆ ಬೆಲೆ 5 ರೂ.ಗಳಷ್ಟು ಏರಿಕೆ ಕಂಡಿದೆ. ಮೊನ್ನೆ 270 ರೂ. ತಲುಪಿದ್ದ ಒಣ ಕೊಬ್ಬರಿ ಬೆಲೆ ಇಂದು 275 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments