Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಸೋಮವಾರ, 28 ಏಪ್ರಿಲ್ 2025 (10:48 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದಿದ್ದರಿಂದ ಬೆಳೆಗಾರರಲ್ಲಿ ನಿರಾಸೆ ಮೂಡಿತ್ತು. ಆದರೆ ಇಂದು ಅಡಿಕೆ ಬೆಲೆ ಹೆಚ್ಚಳವಾಗಿದ್ದು ಬೆಳೆಗಾರರಿಗೆ ಬಂಪರ್ ಸುದ್ದಿ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಳೆ ಕಡಿಮೆ, ಆದರೆ ಬೆಲೆಯೂ ಹೆಚ್ಚೂ ಆಗುತ್ತಿಲ್ಲ, ಕಡಿಮೆಯೂ ಆಗುತ್ತಿಲ್ಲ ಎನ್ನುವ ಸ್ಥಿತಿಯಿತ್ತು. ಇದು ರೈತರಿಗೆ ಕೊಂಚ ನಿರಾಸೆಯಾಗಿತ್ತು. ಆದರೆ ಇಂದು ಬೆಲೆ ಕೊಂಚ ಹೆಚ್ಚಳವಾಗಿದ್ದು ರೈತರಿಗೆ ಹರ್ಷ ತಂದಿದೆ. ಇಂದು ಹೊಸ ಅಡಿಕೆ ಬೆಲೆಯಲ್ಲಿ ಹೆಚ್ಚಳವಾಗಿದೆ. ಹೊಸ ಅಡಿಕೆಗೆ ನಿನ್ನೆ ಗರಿಷ್ಠ 440 ರೂ. ಗಳಷ್ಟಿತ್ತು. ಆದರೆ ಇಂದು 450 ರೂ.ಗಳಾಗಿವೆ. ಆದರೆ ಹಳೆ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ, ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಆದರೆ ಪಟೋರ ದರ ನಿನ್ನೆ ಏರಿಕೆಯಾಗಿತ್ತು. ಇಂದೂ ಅದೇ ಸ್ಥಿತಿ ಮುಂದುವರಿದಿದೆ. ಹೊಸ ಫಟೋರ ದರ 350 ರೂ.ಗಳಷ್ಟಾಗಿದೆ. ಹಳೆ ಫಟೋರ ದರ 360 ರೂ. ಗಳಷ್ಟಿದೆ. ಹೊಸ ಉಳ್ಳಿ ದರ ಭಾರೀ ಏರಿಕೆಯಾಗಿದ್ದು ಗರಿಷ್ಠ 240 ರೂ., ಹಳೆ ಉಳ್ಳಿ ದರವೂ 240 ಗಳಷ್ಟಿದೆ. ಹೊಸ ಕೋಕ ದರ 290 ರೂ., ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿದೆ.  ಇಂದು ಮತ್ತೆ ಕಾಳುಮೆಣಸು ದರ ಯಥಾ ಸ್ಥಿತಿಯಲ್ಲಿದ್ದು 680 ರೂ.ಗಳಷ್ಟಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದಿಂದ ಡ್ರೈ ಫ್ರೂಟ್ಸ್ ಬಂದ್: ಭಾರತದಲ್ಲಿ ಡ್ರೈ ಫ್ರೂಟ್ಸ್ ರೇಟ್ ಜಾಸ್ತಿಯಾಗಲಿದೆ

Pakistan: ಪಾಕಿಸ್ತಾನಕ್ಕೆ ಸಿಕ್ತು ಟರ್ಕಿ ಮಿಲಿಟರಿ ಸಹಾಯ, ಚೀನಾದಿಂದ ಬೆಂಬಲ

ಜನಿವಾರ ಬಿಡಿ, ರೈಲ್ವೇ ಪರೀಕ್ಷೆಗೆ ಮಂಗಳಸೂತ್ರವೂ ಇರಬಾರದಂತೆ: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಸಚಿವ ಸೋಮಣ್ಣ

Faridabad shocker: ಗರ್ಲ್ ಫ್ರೆಂಡ್ ನ ಕೊಂದು ಬೆಡ್ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟಿದ್ದ ಭೂಪ

Pehalgam: ಅಮಾಯಕರನ್ನು ಕೊಂದರೆ ಅಲ್ಲಾಹ್ ಕ್ಷಮಿಸಲ್ಲ: ನಾವು ದೇಶದ ಜೊತೆಗಿದ್ದೇವೆ ಎಂದು ಮುಸ್ಲಿಮರು

ಮುಂದಿನ ಸುದ್ದಿ
Show comments