Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Krishnaveni K
ಬುಧವಾರ, 11 ಜೂನ್ 2025 (12:40 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆ ನಿರಂತರ ಇಳಿಕೆಯಾಗುತ್ತಲೇ ಇದೆ. ಇದರಿಂದ ರೈತರ ಮೊಗದಲ್ಲಿ ಚಿಂತೆ ಮೂಡಿದೆ. ನಿನ್ನೆ ಯಥಾಸ್ಥಿತಿಯದ್ದ ಅಡಿಕೆ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಆದರೆ ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಬೆಳೆಗಾರರಿಗೆ ಬಂಪರ್ ಆಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಈ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗುತ್ತಾ ಬಂದಿದೆ. ಬೆಳೆ ಕಡಿಮೆ ಜೊತೆಗೆ ಬೆಲೆಯೂ ಇಳಿಕೆಯಾಗಿರುವುದರಿಂದ ರೈತರಿಗೆ ನಿರಾಸೆಯಾಗಿದೆ. ಇಂದು ಹೊಸ ಅಡಿಕೆಗೆ ಇಳಿಕೆಯಾಗಿದ್ದರೆ  ಉಳಿದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದೆ. ನಿನ್ನೆ ಹೊಸ ಅಡಿಕೆ ಬೆಲೆ  485 ರೂ.ಗಳಾಗಿತ್ತು. ಇಂದು10 ರೂ. ಇಳಿಕೆಯಾಗಿದ್ದು 475 ರೂ.ಗಳಾಗಿದೆ.  ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ ಮತ್ತು ಹಳೆ ಪಟೋರ ದರ ಮೊನ್ನೆ ಇಳಿಕೆಯಾಗಿತ್ತು. ಇಂದು ಎರಡೂ ಏರಿಕೆಯೂ ಆಗಿಲ್ಲ, ಇಳಿಕೆಯೂ ಆಗಿಲ್ಲ. ಇಂದು ಹೊಸ ಪಟೋರ  ದರ 365 ರೂ.ಗಳಷ್ಟಿದೆ. ಹಳೆ ಫಟೋರ ದರ 365 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 255 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ ತಲಾ 315 ರೂ.ಆಗಿದೆ.
ಕಾಳುಮೆಣಸು ದರ
ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರ. ಇಂದೂ 660 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ಏರಿಕೆಯಾಗಿದ್ದು ಬೆಳೆಗಾರರಿಗೆ ಬಂಪರ್ ಆಗಿದೆ. ಇಂದು ಬರೋಬ್ಬರಿ 25 ರೂ. ಏರಿಕೆಯಾಗಿದ್ದು ಗರಿಷ್ಠ 225 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments