Areanut Price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 8 ಏಪ್ರಿಲ್ 2025 (12:08 IST)
ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಖುಷಿ. ಯಾಕೆಂದರೆ ಇಂದು ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಆದರೆ ಕಾಳುಮೆಣಸು ಬೆಲೆ ಕೊಂಚ ಇಳಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ಇಂದು ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳೆಗಾರರ ಮೊಗದಲ್ಲಿ ಹರ್ಷ ತಂದಿದೆ. ನಿನ್ನೆ ಹೊಸ ಅಡಿಕೆ ಬೆಲೆ ಗರಿಷ್ಠ 430 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 475 ರೂ.ಗಳಷ್ಟಿತ್ತು. ಇಂದು ಹೊಸ ಅಡಿಕೆ ದರ ಮತ್ತು ಹಳೆ ಅಡಿಕೆ ದರ ತಲಾ 10 ರೂ.ಗಳಷ್ಟು ಏರಿಕೆಯಾಗಿದ್ದು ಕ್ರಮವಾಗಿ 440 ಮತ್ತು 485 ರೂ.ಗಳಾಗಿದೆ. ಡಬಲ್ ಚೋಲ್ ಅಡಿಕೆ ಬೆಲೆ 5 ರೂ. ಏರಿಕೆಯಾಗಿದ್ದು ಗರಿಷ್ಠ 500 ರೂ.ಗಳಷ್ಟಿದೆ.

ಹೊಸ ಫಟೋರ ದರ 5 ರೂ. ಏರಿಕೆಯಾಗಿ 320 ರೂ.ಗಳಷ್ಟಾಗಿದೆ. ಹಳೆ ಫಟೋರ 5 ರೂ. ಏರಿಕೆಯಾಗಿ 340 ರೂ. ಗೆ ಗಳಲ್ಲೇ ಇದೆ. ಹೊಸ ಉಳ್ಳಿ ದರ 5 ರೂ. ಏರಿಕೆಯಾಗಿ ಗರಿಷ್ಠ 185 ರೂ., ಹಳೆ ಉಳ್ಳಿ ದರವೂ 5 ರೂ. ಏರಿಕೆಯಾಗಿ 200 ರೂ. ಗಳಾಗಿದೆ. ಹೊಸ ಕೋಕ 10 ರೂ. ಏರಿಕೆಯಾಗಿದ್ದು 270 ರೂ., ಹಳೇ ಕೋಕ 10 ರೂ. ಏರಿಕೆಯಾಗಿ 280 ರೂ. ಗಳಾಗಿದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಇಂದು ಕೊಂಚ ನಿರಾಸೆಯಾಗಲಿದೆ. ಸತತ ಎರಡು ದಿನ ಏರಿಕೆಯಾಗಿತ್ತು. ಆದರೆ ಇಂದು ಕಾಳುಮೆಣಸು ದರ 15 ರೂ. ಇಳಿಕೆಯಾಗಿದ್ದು ಇಂದು ಗರಿಷ್ಠ 695 ರೂ.ಗಳಷ್ಟಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments